ಫೇಸ್ ಬುಕ್ ಸ್ನೇಹಿತೆಯಿಂದ ಮೋಸ, 1.5 ಲಕ್ಷ ರೂ. ವಂಚನೆ 
ರಾಜ್ಯ

ಬೆಂಗಳೂರು: ಫೇಸ್ ಬುಕ್ ಸ್ನೇಹಿತೆಯಿಂದ ಮೋಸ, 1.5 ಲಕ್ಷ ರೂ. ವಂಚನೆ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಜನರನ್ನು ವಂಚಿಸಿ ಹಣ ದೋಚುವ ಪ್ರಕರಣಗಳು ಹೆಚ್ಚುತ್ತಿವೆ.

ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಜನರನ್ನು  ವಂಚಿಸಿ ಹಣ ದೋಚುವ ಪ್ರಕರಣಗಳು ಹೆಚ್ಚುತ್ತಿವೆ. ಇದರಲ್ಲಿಯೂ ಆನ್ ಲೈನ್ ನಲ್ಲಿ ಪರಿಚಯವಾದ ಯುವತಿಯರಿಂದ ವಂಚನೆಗೊಳಗಾಗುವ ಯುವಕರ ಸಂಖ್ಯೆ ಸಾಕಷ್ಟಿದೆ. ಇದೂ ಸಹ ಅಂತಹಾ ಪ್ರಕರಣಗಳಲ್ಲಿ ಒಂದು. 
ಬೆಂಗಳೂರಿನ ಆನಂದ್ ರಾವ್ ಎನ್ನುವಾತ ಆನ್ ಲೈನ್ ನಲ್ಲಿ ಪರಿಚಯವಾದ ಯುವತಿಯೊಬ್ಬಳಿಂದ ವಂಚನೆಗೀಡಾಗಿದ್ದಾರೆ. ಫೆಸ್ ಬುಕ್ ನಲ್ಲಿ ಪರಿಚಯವಾದ ಯುವತಿ ಆನಂದ್ ಅವರಿಂದ 1.5 ಲಕ್ಷ ರೂ. ಪಡೆದು ಯಾಮಾರಿಸಿದ್ದಾಳೆ. 
ಘಟನೆ ವಿವರ: ಫೇಸ್‍ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಆನಂದ್ ರಾವ್ ಜತೆ ಚಾಟ್ ಮಾಡುತ್ತಿದ್ದಳು. ಇಬ್ಬರ ನಡುವೆ ಸ್ನೇಹ ಪ್ರಾರಂಭವಾಗಿತ್ತು. ತಾನು ಇಂಗ್ಲೆಂಡಿನಲ್ಲಿರುವುದಾಗಿ ಹೇಳಿಕೊಂಡ ಯುವತಿ ಜತೆ ಕೆಲ ದಿನಗಳ ಕಾಲ ವಾಟ್ಸ್ ಅಪ್ ಹಾಗೂ ಫೇಸ್ ಬುಕ್ ನಲ್ಲಿ ಆನಂದ್ ಚಾಟ್ ಮಾಡುತ್ತಿದ್ದರು. 
ಅದೊಮ್ಮೆ ಯುವತಿ ತಾನು ಆನಂದ್ ಅವರನ್ನು ಕಾಣಲು ಬೆಂಗಳೂರಿಗೆ ಬರಲಿದ್ದೇನೆ ಎಂದು ಸಂದೇಶ ಕಳಿಸಿದ್ದಾರೆ. ಅದಾಗಿ ಕೆಲ ಸಮಯದ ನಂತರ 'ತಾನು ದೆಹಲಿ ತಲುಪಿದ್ದೇನೆ. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ' ಎಂದು ಮತ್ತೆ ಸಂದೇಶ ಕಳಿಸಿದ್ದು ಆನಂದ್ ಗೆ ಒಂದೂ ವರೆ ಲಕ್ಷ ಬೇಡಿಕೆ ಇಟ್ಟಿದ್ದಾಲೆ. 'ಅಧಿಕಾರಿಗಳು ಒಂದೂವರೆ ಲಕ್ಷ ರೂ ಹಣ ಕೇಳುತ್ತಿದ್ದಾರೆ. ನೀವು ಹಣ ಕಳಿಸಿಕೊಡಿ, ನಾನು ಬೆಂಗಳೂರಿಗೆ ಬಂದೊಡನೆ ನಿಮ್ಮ ಹಣ ಮರಳಿಸುತ್ತೇನೆ' ಎಂದಿದ್ದಾಳೆ.
ಗೆಳತಿ ತೊಂದರೆಯಲ್ಲಿದ್ದಾಳೆ ಎಂದು ನಂಬಿದ ಆನಂದ್ ಯುವತಿ ಖಾತೆಗೆ ಹಣ ವರ್ಗಾಯಿಸಿದ್ದಾರೆ.ಆದರೆ ಹಣ ಕೈಗೆ ಸಿಕ್ಕೊಡನೆ ಯುವತಿ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಅವಳ ವಾಟ್ಸ್ ಅಪ್ ಹಾಗೂ ಫೇಸ್ ಬುಕ್ ಖಾತೆಗಳೂ ಡಿಲೀಟ್ ಆಗಿದೆ. ಆನಂದ್ ಗೆ ತಾನು ಮೋಸ ಹೋಗಿರುವುದರ ಅರಿವಾಗಿದೆ. ಇದೀಗ ಆನಂದ್  ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಪೋಲೀಸರು ಯುವತಿಯ ಶೋಧಕ್ಕೆ ತೊಡಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT