ಪ್ರತಿಭಟನಾನಿರತ ರೈತರು 
ರಾಜ್ಯ

ಬಿಜೆಪಿ ಕಚೇರಿ ಎದುರು ಮಹದಾಯಿ ಹೋರಾಟ: ರೈತ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿಗೆ ಒತ್ತಾಯಿಸಿ ರೈತರು ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿ....

ಬೆಂಗಳೂರು: ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿಗೆ ಒತ್ತಾಯಿಸಿ ರೈತರು ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿ ಎದುರು ಆಹೋರಾತ್ರಿ ಧರಣಿ ನಡೆಸುತ್ತಿದ್ದು, ಹೋರಾಟದಲ್ಲಿ ಭಾಗವಹಿಸಿದ್ದ ರೈತ ಹನುಮಂತಪ್ಪ ಅವರು ಸೋಮವಾರ ತೀವ್ರ ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 
ಆಹೋರಾತ್ರಿ ಧರಣಿ ನಡೆಸಿದ ಹಿನ್ನೆಲೆಯಲ್ಲಿ ರೈತ ಹನುಮಂತಪ್ಪ ಅವರು ಅಸ್ವಸ್ಥಗೊಂಡಿದ್ದು, ಅವರನ್ನು ಮಲ್ಲೇಶ್ವರಂನಲ್ಲಿರುವ ಕೆಸಿ ಜನಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪತ್ರದಲ್ಲಿ ದಿನಾಂಕ ನಿಗದಿಯಾಗದೇ ಇರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿ ರೈತ ಸೇನಾ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ರೈತರು ಕಳೆದೆರೆಡು ದಿನಗಳಿಂದ ಸ್ಥಳ ಬಿಟ್ಟು ಕದಲದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಮಹದಾಯಿ ಹೋರಾಟಗಾರ ಬಗ್ಗೆ ಹುಡುಗಾಟಿಕೆಯಿಂದ ಹಗುರವಾಗಿ ಮಾತನಾಡಬೇಡಿ. ನೀರು ಕೊಡಿಸಲು ಆಗುವುದೋ ಇಲ್ಲವೋ ಸ್ಪಷ್ಟಪಡಿಸಿ ಎಂದು ಬಿಜೆಪಿ ನಾಯಕರಿಗೆ ರೈತ ವಿರೇಶ್ ಸೊಬರದ ಮಠ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT