ಪ್ರತಿಭಟನಾನಿರತ ರೈತರು 
ರಾಜ್ಯ

ಬಿಜೆಪಿ ಕಚೇರಿ ಎದುರು ಮಹದಾಯಿ ಹೋರಾಟ: ರೈತ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿಗೆ ಒತ್ತಾಯಿಸಿ ರೈತರು ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿ....

ಬೆಂಗಳೂರು: ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿಗೆ ಒತ್ತಾಯಿಸಿ ರೈತರು ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿ ಎದುರು ಆಹೋರಾತ್ರಿ ಧರಣಿ ನಡೆಸುತ್ತಿದ್ದು, ಹೋರಾಟದಲ್ಲಿ ಭಾಗವಹಿಸಿದ್ದ ರೈತ ಹನುಮಂತಪ್ಪ ಅವರು ಸೋಮವಾರ ತೀವ್ರ ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 
ಆಹೋರಾತ್ರಿ ಧರಣಿ ನಡೆಸಿದ ಹಿನ್ನೆಲೆಯಲ್ಲಿ ರೈತ ಹನುಮಂತಪ್ಪ ಅವರು ಅಸ್ವಸ್ಥಗೊಂಡಿದ್ದು, ಅವರನ್ನು ಮಲ್ಲೇಶ್ವರಂನಲ್ಲಿರುವ ಕೆಸಿ ಜನಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪತ್ರದಲ್ಲಿ ದಿನಾಂಕ ನಿಗದಿಯಾಗದೇ ಇರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿ ರೈತ ಸೇನಾ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ರೈತರು ಕಳೆದೆರೆಡು ದಿನಗಳಿಂದ ಸ್ಥಳ ಬಿಟ್ಟು ಕದಲದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಮಹದಾಯಿ ಹೋರಾಟಗಾರ ಬಗ್ಗೆ ಹುಡುಗಾಟಿಕೆಯಿಂದ ಹಗುರವಾಗಿ ಮಾತನಾಡಬೇಡಿ. ನೀರು ಕೊಡಿಸಲು ಆಗುವುದೋ ಇಲ್ಲವೋ ಸ್ಪಷ್ಟಪಡಿಸಿ ಎಂದು ಬಿಜೆಪಿ ನಾಯಕರಿಗೆ ರೈತ ವಿರೇಶ್ ಸೊಬರದ ಮಠ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT