ಪ್ರತಿಭಟನಾನಿರತ ರೈತರು 
ರಾಜ್ಯ

ಬಿಜೆಪಿ ಕಚೇರಿ ಎದುರು ಮಹದಾಯಿ ಹೋರಾಟ: ರೈತ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿಗೆ ಒತ್ತಾಯಿಸಿ ರೈತರು ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿ....

ಬೆಂಗಳೂರು: ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿಗೆ ಒತ್ತಾಯಿಸಿ ರೈತರು ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿ ಎದುರು ಆಹೋರಾತ್ರಿ ಧರಣಿ ನಡೆಸುತ್ತಿದ್ದು, ಹೋರಾಟದಲ್ಲಿ ಭಾಗವಹಿಸಿದ್ದ ರೈತ ಹನುಮಂತಪ್ಪ ಅವರು ಸೋಮವಾರ ತೀವ್ರ ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 
ಆಹೋರಾತ್ರಿ ಧರಣಿ ನಡೆಸಿದ ಹಿನ್ನೆಲೆಯಲ್ಲಿ ರೈತ ಹನುಮಂತಪ್ಪ ಅವರು ಅಸ್ವಸ್ಥಗೊಂಡಿದ್ದು, ಅವರನ್ನು ಮಲ್ಲೇಶ್ವರಂನಲ್ಲಿರುವ ಕೆಸಿ ಜನಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪತ್ರದಲ್ಲಿ ದಿನಾಂಕ ನಿಗದಿಯಾಗದೇ ಇರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿ ರೈತ ಸೇನಾ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ರೈತರು ಕಳೆದೆರೆಡು ದಿನಗಳಿಂದ ಸ್ಥಳ ಬಿಟ್ಟು ಕದಲದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಮಹದಾಯಿ ಹೋರಾಟಗಾರ ಬಗ್ಗೆ ಹುಡುಗಾಟಿಕೆಯಿಂದ ಹಗುರವಾಗಿ ಮಾತನಾಡಬೇಡಿ. ನೀರು ಕೊಡಿಸಲು ಆಗುವುದೋ ಇಲ್ಲವೋ ಸ್ಪಷ್ಟಪಡಿಸಿ ಎಂದು ಬಿಜೆಪಿ ನಾಯಕರಿಗೆ ರೈತ ವಿರೇಶ್ ಸೊಬರದ ಮಠ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT