ಕಾರ್ಯಕ್ರಮಕ್ಕೆ ಆಗಮಿಸಿದ್ದ 14ನೇ ದಲೈ ಲಾಮಾ 
ರಾಜ್ಯ

ಧಾರ್ಮಿಕ ಸಹಿಷ್ಣುತೆ ಕಾಪಾಡುವುದು ಮುಖ್ಯ: ದಲೈ ಲಾಮಾ

ಭಾರತದ ಪುರಾತನ ಜ್ಞಾನವನ್ನು ಪುನರುಜ್ಜೀವನಗೊಳಿಸುವುದು ಅತ್ಯಗತ್ಯ ಎಂದು ...

ಬೆಂಗಳೂರು: ಭಾರತದ ಪುರಾತನ ಜ್ಞಾನವನ್ನು ಪುನರುಜ್ಜೀವನಗೊಳಿಸುವುದು ಅತ್ಯಗತ್ಯ ಎಂದು 14ನೇ ದಲೈ ಲಾಮಾ ಹೇಳಿದ್ದಾರೆ. ಧಾರ್ಮಿಕ ಸಾಮರಸ್ಯ ಕಾಪಾಡುವುದು ಕೂಡ ಮುಖ್ಯ ಎಂದರು.
ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಬೆಳ್ಳಿಹಬ್ಬ ಕಾರ್ಯಕ್ರಮದಲ್ಲಿ ನಿನ್ನೆ ನಗರದ ಅರಮನೆ ಮೈದಾನದಲ್ಲಿ ದೇಶದ ಮರು ನಿರ್ಮಾಣದಲ್ಲಿ ಬುದ್ಧಿವಂತಿಕೆಗೆ ಮತ್ತು ಸಹಾನುಭೂತಿಗೆ ಶಿಕ್ಷಣ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು. ಭಾರತದಲ್ಲಿ ವಿವಿಧ ಧರ್ಮ ಮತ್ತು ಸಂಪ್ರದಾಯಗಳನ್ನು 3 ಸಾವಿರ ವರ್ಷಗಳಿಂದ ಅನುಸರಿಸಿಕೊಂಡು ಬರಲಾಗುತ್ತಿದೆ. ಅಷ್ಟು ದೀರ್ಘ ಇತಿಹಾಸ ಭಾರತದ ಧರ್ಮಕ್ಕಿದೆ ಎಂದರು.
ಧರ್ಮದ ಹೆಸರಿನಲ್ಲಿ ಬೇರೆ ದೇಶಗಳಲ್ಲಿ ಸಂಘರ್ಷಗಳು ನಡೆಯುತ್ತವೆ. ಇದಕ್ಕೆಲ್ಲಾ ಭಾರತ ಮಾದರಿಯಾಗಿ ಉದಾಹರಣೆಯಾಗಿ ನಿಂತು ಧಾರ್ಮಿಕ ವಿವಾದಗಳನ್ನು ಬಗೆಹರಿಸಬಹುದು. ಧಾರ್ಮಿಕ ಸಹಿಷ್ಣುತೆ ಅಭಿವೃದ್ಧಿಪಡಿಸಲು ನಾನು ಬದ್ಧನಾಗಿದ್ದೇನೆ ಎಂದರು.
ಭಾರತದ ಪುರಾತನ ಜ್ಞಾನವನ್ನು ಪುನರುಜ್ಜೀವನಗೊಳಿಸುವ ಅಗತ್ಯವಿದೆ ಎಂದು ಹೇಳಿದ ದಲೈಲಾಮ ಅದು ಇಂದಿನ ಜಗತ್ತಿಗೆ ಅಗತ್ಯ ಕೂಡ ಆಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನಗಳಲ್ಲಿ ಹಲವು ಅಭಿವೃದ್ಧಿಗಳಾಗಿವೆ. ಸಾವಿರ ವರ್ಷಗಳ ಇತಿಹಾಸ, ಸಂಪ್ರದಾಯಗಳಿರುವ ಭಾರತ ದೇಶ, ಭಾವನೆಗಳ ಜೊತೆ ಹೇಗೆ ಸ್ಪಂದಿಸಬೇಕು ಎಂಬುದನ್ನು ಕಲಿಸುತ್ತದೆ ಎಂದರು.
ಭೌತಿಕ ಮತ್ತು ಆಂತರಿಕ ಬೆಳವಣಿಗೆಗೆ ಶಿಕ್ಷಣ ವ್ಯವಸ್ಥೆ ಒತ್ತು ನೀಡಬೇಕು. ನರೇಂದ್ರ ಮೋದಿ ಸರ್ಕಾರದ ಬಗ್ಗೆ ಸಭಿಕರು ಪ್ರಶ್ನೆ ಕೇಳಿದಾಗ ನನಗೆ ಇದರಲ್ಲಿ ಯಾವುದೇ ನೇರ ವ್ಯವಹಾರಗಳಿಲ್ಲ. ಅದು ನಿಮಗೆ ಬಿಟ್ಟಿದ್ದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT