ಮಹದಾಯಿ ನದಿ 
ರಾಜ್ಯ

ಗಡಿ ವಿವಾದ ಇತ್ಯಾರ್ಥವಾಗುವವರೆಗೆ ಕರ್ನಾಟಕಕ್ಕೆ ಸಹಾಯ ಮಾಡಬೇಡಿ: ಮಹರಾಷ್ಟ್ರಕ್ಕೆ ಆಗ್ರಹ

ಕರ್ನಾಟಕ-ಮಹರಾಷ್ಟ್ರ ಗಡಿ ವಿವಾದ ಇತ್ಯಾರ್ಥವಾಗುವವರೆಗೆ ಮಹದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಸಹಾಯ ಮಾಡಬೇಡಿ ಎಂದು...

ಬೆಳಗಾವಿ: ಕರ್ನಾಟಕ-ಮಹರಾಷ್ಟ್ರ ಗಡಿ ವಿವಾದ ಇತ್ಯಾರ್ಥವಾಗುವವರೆಗೆ ಮಹದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಸಹಾಯ ಮಾಡಬೇಡಿ ಎಂದು ಮಹರಾಷ್ಟ್ರ ಏಕಿಕರಣ ಸಮಿತಿ(ಎಂಇಎಸ್)ಯ ಮರಾಠಿ ಯುವ ಮಂಚ್ ಸಂಘಟನೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಒತ್ತಾಯಿಸಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರದ ವಿವಾದಿತ ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಮಹದಾಯಿ ಯೋಜನೆ ಜಾರಿಗೊಳಿಸುತ್ತಿದೆ. ಆದರೆ ಮಹಜನ್ ಆಯೋಗದ ವರದಿಯ ಪ್ರಕಾರ ಅದು ಶೇ.100ರಷ್ಟು ಮಹಾರಾಷ್ಟ್ರಕ್ಕೆ ಸೇರಿದ ಪ್ರದೇಶವಾಗಿದೆ ಎಂದು ಮರಾಠಿ ಯುವ ಮಂಚ್ ಫಡ್ನವಿಸ್ ಗೆ ಬರೆದ ಪತ್ರದಲ್ಲಿ ತಿಳಿಸಿದೆ.
ಮಹದಾಯಿ ವಿವಾದ ಕೇವಲ ಗೋವಾ ಮತ್ತು ಕರ್ನಾಟಕ ನಡುವಿನ ವಿವಾದ ಮಾತ್ರವಲ್ಲ. ಮಹರಾಷ್ಟ್ರದ್ದು ಅದರಲ್ಲಿ ಪಾಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಉತ್ತರ ಕರ್ನಾಟಕ ಜನತೆಯ ಕುಡಿಯುವ ನೀರಿನ ಬೇಡಿಕೆ ಈಡೇರಿಸುವುದಕ್ಕಾಗಿ ರಾಜ್ಯ ಸರ್ಕಾರ ಮಹದಾಯಿ ಯೋಜನೆ ಜಾರಿಗೊಳಿಸಲು ಯತ್ನಿಸುತ್ತಿದ್ದು, ಅದಕ್ಕೆ ಗೋವಾ ವಿರೋಧ ವ್ಯಕ್ತಪಡಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?