ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಹೊಸ ವರ್ಷಾಚರಣೆಯಲ್ಲಿ ಸಂಭ್ರಮಿಸುವ ಪ್ರತಿ 17 ಮಂದಿಗೆ ಒಬ್ಬ ಪೊಲೀಸ್ ಸಿಬ್ಬಂದಿ

ಈ ಹೊಸ ವರ್ಷ ನೀವು ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಕಳೆಯಬೇಕೆಂದು ಯೋಚಿಸಿದರೆ ಅಥವಾ....

ಬೆಂಗಳೂರು: ಈ ಹೊಸ ವರ್ಷ ನೀವು ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಕಳೆಯಬೇಕೆಂದು ಯೋಚಿಸಿದರೆ ಅಥವಾ ನಗರದ ಯಾವುದೇ ಪ್ರಮುಖ ಸ್ಥಳಗಳಲ್ಲಿ ಸುತ್ತಾಡಬೇಕೆಂದು ಬಯಸಿದರೆ ಮದ್ಯಪಾನ ಸೇವನೆಯಿಂದ ಆದಷ್ಟು ದೂರವಿರಲು ಪ್ರಯತ್ನಿಸಿ.
ಯಾಕೆಂದರೆ ಮೋಜು ಮಾಡುವವರಂತೆ ವರ್ತಿಸುವ ನಿಮ್ಮ ಪಕ್ಕದಲ್ಲಿರುವವರು ಮುಫ್ತಿಯಲ್ಲಿರುವ ಪೊಲೀಸರಾಗಿರಬಹುದು. ಕಳೆದ ವರ್ಷದಂತೆ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ಕಲ್ಪಿಸಲು ಪೊಲೀಸರು ನಾಗರಿಕರಂತೆ ವೇಷ ಹಾಕಿಕೊಂಡು ಜನರ ಮಧ್ಯೆ ಬಂದು ತಪಾಸಣೆ ಮಾಡಬಹುದು.
ನಗರದ ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಮೋಜು-ಮಸ್ತಿಯಲ್ಲಿ ತೊಡಗುವ ಪ್ರತಿ 17 ಮಂದಿಗೆ ಒಬ್ಬ ಪೊಲೀಸರನ್ನು ನಿಯೋಜಿಸಲು ನಗರ ಪೊಲೀಸ್ ಇಲಾಖೆ ಯೋಜನೆ ಹಾಕಿಕೊಂಡಿದೆ.  500 ಮಂದಿ ಮಹಿಳಾ ಸಿಬ್ಬಂದಿ ಸೇರಿದಂತೆ 2,000 ಪೊಲೀಸ್ ಸಿಬ್ಬಂದಿಯನ್ನು ನಗರ ಪೊಲೀಸ್ ಇಲಾಖೆ ಬೆಂಗಳೂರಿನ ಮುಖ್ಯ ಸ್ಥಳಗಳಲ್ಲಿ ನಿಯೋಜಿಸಲಿದೆ. ಇದಕ್ಕೆ ಹೊರತಾಗಿ ಕ್ಯಾಮರಾ ನಿಯೋಜಿತ ಡ್ರೋನ್ ಮತ್ತು ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ವಾಚ್ ಟವರ್ ಮೊದಲಾದವುಗಳನ್ನು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹದ್ದಿನ ಕಣ್ಣಿಡಲು ನಿಯೋಜಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಯ ಪ್ರಮುಖ ಸ್ಥಳಗಳಲ್ಲಿ ಡ್ರೋನ್ ಕ್ಯಾಮರಾಗಳನ್ನು ಬಳಸಲಾಗುತ್ತದೆ. ಚರ್ಚ್ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಅಲ್ಲಿ ಕೂಡ ಕೆಲವು ನಿರ್ಬಂಧಗಳನ್ನು ಹೇರಲಾಗುವುದು ಎಂದು ಸುನೀಲ್ ಕುಮಾರ್ ತಿಳಿಸಿದರು.
ಗುಪ್ರಚರ ಇಲಾಖೆಯ ಸಿಬ್ಬಂದಿ ಮತ್ತು ಸಿವಿಲ್ ಬಟ್ಟೆಯಲ್ಲಿ ಪೊಲೀಸರು ಜನಸಾಮಾನ್ಯರ ನಡುವೆ ಹೊಸ ವರ್ಷಾಚರಣೆ ಸಮಯದಲ್ಲಿ ಸಂಚರಿಸಲಿದ್ದಾರೆ. ನಾಡಿದ್ದು 31ರಂದು ರಾತ್ರಿ ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆ, ಚರ್ಚ್ ರಸ್ತೆಗಳಲ್ಲಿ ಸುಮಾರು 35,000 ಮಂದಿ ಸೇರುವ ಸಾಧ್ಯತೆಯಿದ್ದು ಮಹಿಳೆಯರಿಗೆ ಭದ್ರತೆ ಕಲ್ಪಿಸಲು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಬಾರಿ ಪೊಲೀಸ್ ಇಲಾಖೆ ತೀವ್ರ ಕಟ್ಟೆಚ್ಚರ ವಹಿಸಿದೆ. 
ಇದೇ ಮೊದಲ ಬಾರಿಗೆ ಹೊಸ ವರ್ಷಾಚರಣೆ ಸಮಯದಲ್ಲಿ ಬೆಂಗಳೂರು ನಗರದಲ್ಲಿ ಪೊಲೀಸ್ ಇಲಾಖೆ ಇಷ್ಟೊಂದು ಬೃಹತ್ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುತ್ತಿರುವುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT