ಚಾಮುಂಡಿ ಬೆಟ್ಟದ ಪ್ರವೇಶ ದ್ವಾರ 
ರಾಜ್ಯ

ಹೊಸ ವರ್ಷ ಮುನ್ನಾದಿನ ಚಾಮುಂಡಿ ಬೆಟ್ಟಕ್ಕೆ ವಾಹನಗಳ ಪ್ರವೇಶ ನಿಷೇಧ

ಚಾಮುಂಡಿ ಬೆಟ್ಟದಲ್ಲಿ ಹೊಸ ವರ್ಷದಲ್ಲಿ ಪಾರ್ಟಿ ಮಾಡಿ ದುಷ್ಕರ್ಮಿಗಳು ದಾಂಧಲೆ ನಡೆಸುವುದನ್ನು ತಡೆಯಲು ....

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಹೊಸ ವರ್ಷದಲ್ಲಿ ಪಾರ್ಟಿ ಮಾಡಿ ದುಷ್ಕರ್ಮಿಗಳು ದಾಂಧಲೆ ನಡೆಸುವುದನ್ನು ತಡೆಯಲು ಡಿಸೆಂಬರ್ 31ರಂದು ರಾತ್ರಿ 9 ಗಂಟೆಯಿಂದ ಮರುದಿನ ಸೋಮವಾರ ನಸುಕಿನ ಜಾವದವರೆಗೆ ಎಲ್ಲಾ ವಾಹನಗಳ ಪ್ರವೇಶವನ್ನು ನಿಷೇಧಿಸಲು ಮೈಸೂರು ಸಂಚಾರ ಪೊಲೀಸರು ನಿರ್ಧರಿಸಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಪ್ರವೇಶ ಜಾಗವನ್ನು ನಿರ್ಬಂಧಿಸಲಾಗುತ್ತಿದ್ದು, ಪ್ರವೇಶ ದ್ವಾರದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಕೆಲವು ದುಷ್ಕರ್ಮಿಗಳು ಹೊಸ ವರ್ಷಾಚರಣೆಯೆಂದು ಕುಡಿದು ಬಂದು ವೇಗದಿಂದ ವಾಹನ ಚಲಾಯಿಸುವುದು, ದಾಂಧಲೆ ಮಾಡುವುದು ಇತ್ಯಾದಿಗಳನ್ನು ಮಾಡುತ್ತಾರೆ. ಇದರಿಂದ ಅಪಘಾತವಾದ ಪ್ರಕರಣಗಳು ಕೂಡ ಈ ಹಿಂದೆ ನಡೆದಿವೆ ಎನ್ನುತ್ತಾರೆ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿಕ್ರಮ್ ವಿ.ಅಮತೆ.
ನಗರದ ಪ್ರಮುಖ ರಸ್ತೆಗಳಲ್ಲಿ ರಸ್ತೆತಡೆಯನ್ನು ಅಳವಡಿಸಲಾಗುವುದು. ಸಿಸಿಟಿವಿ ಕ್ಯಾಮರಾಗಳ ಲೈವ್ ಫೂಟೇಜ್ ಗಳನ್ನು ವೃತ್ತಗಳಲ್ಲಿ ನಿಯೋಜಿಸಿ ಪರಿಸ್ಥಿತಿಯನ್ನು ಗಮನಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT