ಗೂಗಲ್-ಡೂಡಲ್ 
ರಾಜ್ಯ

ರಾಷ್ಟ್ರಕವಿ ಕುವೆಂಪು ಗೆ ಗೂಗಲ್ ಗೌರವ; ಜನ್ಮದಿನಕ್ಕೆ ಕನ್ನಡದಲ್ಲೇ ಡೂಡಲ್

20ನೇ ಶತಮಾನದ ಪ್ರಮುಖ ಸಾಹಿತಿ ಕನ್ನಡ ಸಾಹಿತ್ಯ ಕ್ಷೇತ್ರದ ಮುಕುಟಮಣಿ ರಾಷ್ಟ್ರಕವಿ ಕುವೆಂಪು ಅವರ 113ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಖ್ಯಾತ ಅಂತರ್ಜಾಲ ಶೋಧ ತಾಣ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಕೆ ಮಾಡಿದೆ.

ಬೆಂಗಳೂರು: 20ನೇ ಶತಮಾನದ ಪ್ರಮುಖ ಸಾಹಿತಿ ಕನ್ನಡ ಸಾಹಿತ್ಯ ಕ್ಷೇತ್ರದ ಮುಕುಟಮಣಿ ರಾಷ್ಟ್ರಕವಿ ಕುವೆಂಪು ಅವರ 113ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಖ್ಯಾತ ಅಂತರ್ಜಾಲ ಶೋಧ ತಾಣ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಕೆ ಮಾಡಿದೆ.
ಇಂದು ಅಂದರೆ ಡಿಸೆಂಬರ್ 29ರಂದು ರಸಋಷಿವ ಕುವೆಂಪು ಅವರ 113ನೇ ಜನ್ಮ ದಿನಾಚರಣೆಯಾಗಿದ್ದು, ಗೂಗಲ್ ತನ್ನ ಮುಖಪುಟದಲ್ಲಿ ಕುವೆಂಪು ಭಾವ ಚಿತ್ರವಿರುವ ಕನ್ನಡಲೇ ಗೂಗಲ್ ಎಂದು ಬರೆದಿರುವ ಡೂಡಲ್ ಮೂಲಕ  ವಿಶೇಷ ಗೌರವ ಸಲ್ಲಿಕೆ ಮಾಡಿದೆ. ಬಿಳಿ ಪಂಚೆ ಮತ್ತು ಜುಬ್ಬದಲ್ಲಿ ಕುವೆಂಪು ಕಂಗೊಳಿಸುತ್ತಿದ್ದು, ಪ್ರಕೃತಿಯ ಮಡಿಲಲ್ಲಿ ಬಂಡೆ ಮೇಲೆ ಕುಳಿತಿರುವ ಕುವೆಂಪು, ಅವರ ಹಿನ್ನಲೆಯಲ್ಲಿ ಅವರ ಕುಪ್ಪಳ್ಳಿ ನಿವಾಸ ಮತ್ತು ಪ್ರಕೃತಿ ಸೌದರ್ಯ  ಇರುವ ಭಾವಚಿತ್ರವನ್ನು ಗೂಗಲ್ ಮುಖಪುಟದಲ್ಲಿ ಬಳಕೆ ಮಾಡಿಕೊಂಡಿದೆ. 
1904 ಡಿಸೆಂಬರ್ 29ರಂದು ಕುಪ್ಪಳ್ಳಿಯಲ್ಲಿ ಕುವೆಂಪು ಅವರು ಜನಿಸಿದ್ದರು. ಶ್ರೀರಾಮಯಣ ದರ್ಶನಂ, ಮಲೆಗಳಲ್ಲಿ ಮದುಮಗಳು ನಂತಹ ಮೇರು ಕೃತಿಗಳನ್ನು ರಚಿಸಿರುವ ಕುವೆಂಪು ಅವರು, ನಾಟಕ, ವಿಮರ್ಶೆ, ಪ್ರೇಮಗೀತೆ,  ಕಾದಂಬರಿ, ಕಾವ್ಯ, ವಿಮರ್ಶಾತ್ಮಕ ಪ್ರಬಂಧ, ಮಕ್ಕಳ ನಾಟಕ, ಸಾನೆಟ್ಟುಗಳು, ಮಹಾಕಾವ್ಯ ಹೀಗೆ ವಿವಿಧ ಪ್ರಕಾರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರವನ್ನು ಉತ್ತುಂಗಕ್ಕೆ ಕೊಂಡೊಯ್ದವರಲ್ಲಿ ಪ್ರಮುಖರಾಗಿರುವ  ಕುವೆಂಪು ಅವರು, ಕನ್ನಡಕ್ಕೆ ತಮ್ಮ ‘ಶ್ರೀ ರಾಮಾಯಣ ದರ್ಶನಂ’ ಕೃತಿಯ ಮೂಲಕ  ಮೊದಲ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 
ಕನ್ನಡದ ಮೇರು ಸಾಹಿತಿಗಳಲ್ಲಿ ಒಬ್ಬರಾಗಿರುವ ಕುವೆಂಪು ಅವರಿಗೆ ಗೂಗಲ್ ಕನ್ನಡದಲ್ಲೇ ಡೂಡಲ್ ಬಿಡಿಸುವ ಮೂಲಕ ಗೌರವ ಸಲ್ಲಿಕೆ ಮಾಡಿರುವುದು ವಿಶೇಷವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT