ಪ್ರೀತಿ ಗೆಲ್ಹೋಟ್ ಚೂಯಿಂಗ್ ಗಮ್ ಜಗಿಯುತ್ತಿರುವುದು. 
ರಾಜ್ಯ

ನಾಡಗೀತೆಗೆ ಅಗೌರವ: ಐಎಎಸ್ ಅಧಿಕಾರಿ ಪ್ರೀತಿ ಗೆಲ್ಹೋಟ್ ಅಮಾನತು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಾಡಗೀತೆಗೆ ಅಗೌರವ ತೋರಿದ್ದ ಐಎಎಸ್ ಪ್ರೊಬೇಷನರಿ....

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಾಡಗೀತೆಗೆ ಅಗೌರವ ತೋರಿದ್ದ ಐಎಎಸ್ ಪ್ರೊಬೇಷನರಿ ಅಧಿಕಾರಿ ಪ್ರೀತಿ ಗೆಲ್ಹೋಟ್ ಅವರನ್ನು ಶುಕ್ರವಾರ ರಾಜ್ಯ ಸರ್ಕಾರ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ನಿನ್ನೆ ತುಮಕೂರು ಜಿಲ್ಲೆಯ ಶಿರಾದ ಸರ್ಕಾರಿ ಕಾಲೇಜು ಮೈದಾನದಲ್ಲಿ ಸಿದ್ದರಾಮಯ್ಯ ಅವರು ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಪ್ರಾರಂಭಕ್ಕೂ ಮೊದಲು ನಾಡಗೀತೆ ಹಾಡುವ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವ ಟಿ.ಬಿ ಜಯಚಂದ್ರ, ಎಚ್. ಆಂಜನೇಯ, ಸೇರಿದಂತೆ ಸ್ಥಳೀಯ ಶಾಸಕರು, ಉನ್ನತ ಮಟ್ಟದ ಅಧಿಕಾರಿಗಳು ಎದ್ದು ನಿಂತು ಗೌರವ ಸೂಚಿಸುತ್ತಿದ್ದರು.
ಈ ಸಂದರ್ಭದಲ್ಲಿ ಐಎಎಸ್ ಅಧಿಕಾರಿ ಪ್ರೀತಿ ಗೆಲ್ಹೋಟ್, ಚೂಯಿಂಗ್ ಗಮ್ ಜಗಿಯುವ ಮೂಲಕ ನಾಡಗೀತೆಗೆ ಅಗೌರವ ತೋರಿದ್ದರು. ಪ್ರೀತಿ ಗೆಲ್ಹೋಟ್ ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರೊಬೇಷನರಿ ಸೇವಾವಧಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಪ್ರೊಬೇಷನರಿ ಸೇವಾ ಅವಧಿಯಲ್ಲೇ ನಾಡಗೀತೆಗೆ ಅಗೌರವ ತೋರಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಇಂದು ಪ್ರೀತಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT