ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ 
ರಾಜ್ಯ

ಬೆಂಗಳೂರು: ದಟ್ಟ ಮಂಜು, ವಿಮಾನ ಹಾರಾಟದಲ್ಲಿ ವ್ಯತ್ಯಯ

ಬೆಂಗಳುರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತ ಮುತ್ತ ದಟ್ಟ ಮಂಜು ಕವಿದಿದ್ದ ಕಾರಣ ಇಂದು ಬೆಳಗ್ಗೆ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು.

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತ ಮುತ್ತ ದಟ್ಟ ಮಂಜು ಕವಿದಿದ್ದ ಕಾರಣ ಇಂದು ಬೆಳಗ್ಗೆ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು. ಮಂಜಿನ ವಾತಾವರಣದಿಂದ ಒಟ್ಟು ಎಂಟು ವಿಮಾನಗಳ ಹಾರಾಟ ರದ್ದಾಗಿತ್ತು. ಇನ್ನು ನಾಲ್ಕು ವಿಮಾನಗಳನ್ನು ಬೇರೆ ವಿಮಾನ ನಿಲ್ದಾಣಕ್ಕೆ ತೆರಳುವಂತೆ ಸೂಚಿಸಿದ್ದರೆ ಒಟ್ಟು 102 ವಿಮಾನಗಳು ವಿಳಂಬವಾಗಿ ಟೇಕ್ ಆಫ್ ಆಗಿದ್ದವು.
ಬೆಂಗಳೂರು ಬೆಂಗಲೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಬಿಐಎಎಲ್) ಅಧಿಕಾರಿಗಳ ಪ್ರಕಾರ, ನಿತ್ಯದ ವಿಮಾನ ಕಾರ್ಯಾಚರಣೆಗಳನ್ನು ಬೆಳಗ್ಗೆ 4.58 ರಿಂದ 8.23 ರವರೆಗೆ ಸ್ಥಗಿತಗೊಳಿಸಲಾಗಿತ್ತು. ಇದರಲ್ಲಿ ಒಟ್ಟು ನಾಲ್ಕು ವಿಮಾನಗಳು ಬೇರೆ ನಿಲ್ದಾಣಗಳಿಗೆ ವರ್ಗಾವಣೆಗೊಂಡವು.ಇನ್ನು ರದ್ದು ಗೊಂಡ ಎಲ್ಲಾ ಎಂಟು ವಿಮಾನಗಳೂ ಇಂಡಿಗೋ ವಿಮಾನ ಸಂಸ್ಥೆಗೆ ಸೇರಿದವಾಗಿದ್ದವು. ಒತ್ಟು 44  ವಿಮಾನಗಳ ಆಗಮನ ಹಾಗೂ 58 ವಿಮಾನಗಳ ನಿರ್ಗಮನ ವಿಳಂಬವಾಗಿತ್ತು. 
ಬೇರೆಡೆಗೆ ಸ್ಥಲಾಂತರಗೊಂಡ ನಾಲ್ಕು ವಿಮಾನಗಳಲ್ಲಿ  ಬ್ರಿಟಿಷ್ ಏರ್ವೇಸ್, ಬ್ಲೂಡಾರ್ಟ್ ಮತ್ತು ಓಮನ್ ಏರ್ ಸಂಸ್ಥೆ ವಿಮಾನಗಳು ಚೆನ್ನೈ ವಿಮಾನ ನಿಲ್ದಾಣದಲ್ಲಿ ಇಳಿದಿದ್ದರೆ ಇಂಡಿಗೋ ಸಂಸ್ಥೆಯ ಒಂದು ವಿಮಾನ ಹೈದರಾಬಾದ್ ನಿಲ್ದಾಣದಲ್ಲಿ ಇಳಿದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT