ಸಂಗ್ರಹ ಚಿತ್ರ 
ರಾಜ್ಯ

ಮೈಸೂರಲ್ಲೇ ವಿಷ್ಣು ಸ್ಮಾರಕ ನಿರ್ಮಾಣ: ಭಾರತಿ ವಿಷ್ಣು ವರ್ಧನ್

ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಅವರ ಸ್ಮಾರಕ ಮೈಸೂರಿನಲ್ಲೇ ನಿರ್ಮಾಣ ಮಾಡಲಿದ್ದೇವೆ ಎಂದು ವಿಷ್ಣುವರ್ಧನ್ ಪತ್ನಿ ಹಾಗೂ ನಟಿ ಭಾರತಿ ವಿಷ್ಣುವರ್ಧನ್‌ ಮತ್ತೆ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಅವರ ಸ್ಮಾರಕ ಮೈಸೂರಿನಲ್ಲೇ ನಿರ್ಮಾಣ ಮಾಡಲಿದ್ದೇವೆ ಎಂದು ವಿಷ್ಣುವರ್ಧನ್ ಪತ್ನಿ ಹಾಗೂ ನಟಿ ಭಾರತಿ ವಿಷ್ಣುವರ್ಧನ್‌ ಮತ್ತೆ ಸ್ಪಷ್ಟಪಡಿಸಿದ್ದಾರೆ.
ಇಂದು  ಡಾ.ವಿಷ್ಣುವರ್ಧನ್‌ ಅವರ 8ನೇ ವರ್ಷದ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಜೆಪಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಭಾರತಿ ವಿಷ್ಣು ವರ್ಧನ್ ಅವರು, ವಿಷ್ಣು ಸ್ಮಾರಕ ಮೈಸೂರಿನಲ್ಲೇ  ನಿರ್ಮಾಣವಾಗಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಸ್ಮಾರಕಕ್ಕೆ ಅಡ್ಡ ನಿಲ್ಲುವವರೇ ಹೆಚ್ಚು. ಇಂತಹ ವಿಚಾರಗಳಿಗೆಲ್ಲಾ ಅಭಿಮಾನಿಗಳು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ  ಎಂದು ಹೇಳಿದರು.
ವಿಷ್ಣು ವರ್ಧನ್ ಸ್ಮಾರಕವನ್ನು ಎಲ್ಲರೂ ಸೇರಿ ಮಾಡೋಣ. ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಯಾರೇ ಅಡ್ಡ ನಿಂತರೂ ಅವರ ಬಗ್ಗೆ ಅಭಿಮಾನಿಗಳು ತಲೆಕೆಡಿಸಿಕೊಳ್ಳಬೇಕಿಲ್ಲ. ಜನವರಿ 15ರ ಬಳಿಕ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣದ  ಕೆಲಸಗಳು ಆರಂಭವಾಗುತ್ತವೆ. ನಮ್ಮ ಕೈಯಿಂದ ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡೋಣ ಎಂದರು. ಅಂತೆಯೇ ಸಂಸ್ಕಾರದ ನಂತರ ಅಭಿಮಾನ್‌ ಸ್ಟುಡಿಯೋದಲ್ಲಿ ಹೇಳುವವರು, ಕೇಳುವವರು ಯಾರು ಇರಲಿಲ್ಲ. ನಾನು  ಕೆಲಸ ಪ್ರಾರಂಭ ಮಾಡಿದೆ. ಅಲ್ಲಿ ಒಂದು ಪುಣ್ಯ ಭೂಮಿಯನ್ನಾಗಿ ಮಾಡಿದ ಸಂತೋಷ ಇದೆ. ಈಗ ಆ ಕಾರ್ಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.
ಇನ್ನು ವಿಷ್ಣುವರ್ಧನ್‌ ಅವರ 8ನೇ ವರ್ಷದ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಬೆಂಗಳೂರಿನ ಅಭಿಮಾನ್‌ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಭೇಟಿ ನೀಡುತ್ತಿದ್ದು, ವಿಷ್ಣುವರ್ಧನ್‌ ಅವರ  ಸಮಾಧಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ಅಂತೆಯೇ ಇದರೊಂದಿಗೆ ಅನ್ನದಾನ, ರಕ್ತದಾನ, ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನೂ ಕೂಡ ಆಯೋಜನೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?