ಸಾಂದರ್ಭಿಕ ಚಿತ್ರ 
ರಾಜ್ಯ

ಡಿಎಲ್ ಪರೀಕ್ಷೆ ವೇಳೆ ಸಿಖ್ ವ್ಯಕ್ತಿಗೆ ಅವಮಾನಿಸಿ ಸಂಕಷ್ಟಕ್ಕೆ ಸಿಲುಕಿದ ಅಧಿಕಾರಿ

ಡ್ರೈವಿಂಗ್ ಲೈಸೆನ್ಸ್ ಪಡೆಯಲು ಪರೀಕ್ಷೆ ನೀಡುತ್ತಿದ್ದ ಸಂದರ್ಭದಲ್ಲಿ ಹೆಲ್ಮೆಟ್ ಧರಿಸುವಂತೆ ಸಿಖ್ ವ್ಯಕ್ತಿಗೆ ಅವಮಾನಿಸಿದ ಅಧಿಕಾರಿಯೊಬ್ಬರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ...

ಮಂಗಳೂರು: ಡ್ರೈವಿಂಗ್ ಲೈಸೆನ್ಸ್ ಪಡೆಯಲು ಪರೀಕ್ಷೆ ನೀಡುತ್ತಿದ್ದ ಸಂದರ್ಭದಲ್ಲಿ ಹೆಲ್ಮೆಟ್ ಧರಿಸುವಂತೆ ಸಿಖ್ ವ್ಯಕ್ತಿಗೆ ಅವಮಾನಿಸಿದ ಅಧಿಕಾರಿಯೊಬ್ಬರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. 
ಮಂಗಳೂರಿನ ಬಳ್ಳಾಲ್ ಬಾಗ್ ನಿವಾಸಿಯಾಗಿರುವ ಕರ್ಮೇಂದರ್ ಸಿಂಗ್ ರಾಥೋಡ್ ಎಂಬುವವರು ಮಂಗಳೂರು ಹೊರವಲಯದ ಮೂಡುಶೆಟ್ಟೆಯಲ್ಲಿರುವ ಡ್ರೈವಿಂಗ್ ಟೆಸ್ಟ್ ಕೇಂದ್ರಕ್ಕೆ ಟೆಸ್ಟ್ ನೀಡಲೆಂದು ತೆರಳಿದ್ದರು. ಈ ವೇಳೆ ತಲೆಗೆ ಹೆಲ್ಮೆಟ್ ಧರಿಸುವಂತೆ ಅಲ್ಲಿದ್ದ ಅಧಿಕಾರಿಗಳು ಸೂಚಿಸಿದ್ದಾರೆ. ಈ ವೇಳೆ ತಮಗೆ ಹೆಲ್ಮೆಟ್ ಧಾರಣೆಯಿಂದ ವಿನಾಯಿತಿ ಇರುವ ಪತ್ರವನ್ನು ಕರ್ಮೇಂದರ್ ಸಿಂಗ್ ಅವರು ಅಧಿಕಾರಿಗೆ ತೋರಿಸಿದ್ದಾರೆ. 
ಈ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಆರ್'ಟಿಒ ನಿರೀಕ್ಷಕ ನಾಗರಾಜ್ ಭಟ್ ಎಂಬುವವರಿ ನಿಮ್ಮ ಬಳಿ ತಲೆ ಇದ್ದರೆ, ಹೆಲ್ಮೆಟ್ ಧರಿಸಲೇಬೇಕು ಎಂದು ನಿಂದಿಸಿದ್ದಾರೆ. 
ಇದರಿಂದ ತಮಗೆ ಸಾರ್ವಜನಿಕವಾಗಿ ಅವಮಾನ ಮಾಡಲಾಗಿದೆ ಎಂದು ಕರ್ಮೇಂದರ್ ಸಿಂಗ್ ಅವರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. 
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಧಿಲ್ ಅವರು, ಪ್ರಕರಣ ಸಂಬಂಧ ಕರ್ಮೇಂದರ್ ಸಿಂಗ್ ಎಂಬುವವರು ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಆರ್'ಟಿಒ ಅಧಿಕಾರಿಗಳಿಗೆ ಸೂಚಿಸಿದ್ದೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Operation Sindoor ಬಳಿಕ ಪಂಜಾಬ್ ಅಸ್ಥಿರಗೊಳಿಸಲು ಪಾಕ್ proxy war; 'ಸಂಘಟಿತ ಅಪರಾಧ ಬೇರುಸಹಿತ ಕಿತ್ತೊಗೆಯುತ್ತೇವೆ'!

New year 2026: ನಗರದಾದ್ಯಂತ ಸಂಭ್ರಮಾಚರಣೆ: ಸಂಭ್ರಮದ ಮಧ್ಯೆ ಯುವಕರ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ!

UP: 2025 ರಲ್ಲಿ 2,500 ಕ್ಕೂ ಹೆಚ್ಚು ಎನ್‌ಕೌಂಟರ್‌; 48 ಸಾವು, 8 ವರ್ಷಗಳಲ್ಲಿ ಅತಿ ಹೆಚ್ಚು

ಭಾರತ-ಬಾಂಗ್ಲಾದೇಶ ಸಂಬಂಧಗಳಿಗೆ ಖಲೀದಾ ಜಿಯಾ ಕೊಡುಗೆ ನೀಡಿದ್ದಾರೆ: ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಪತ್ರ

'CEC ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ'; SIR ಕುರಿತು ನಮ್ಮ ಕಳವಳ ಪರಿಹರಿಸಿಲ್ಲ: ಅಭಿಷೇಕ್ ಬ್ಯಾನರ್ಜಿ

SCROLL FOR NEXT