ಮಾನಸಿಕ ಸಮಸ್ಯೆಗಳ ಬಗೆಗೆ ಬಹಿರಂಗವಾಗಿ ಚರ್ಚೆಯಾಗಬೇಕು: ರಾಮನಾಥ ಕೋವಿಂದ್ 
ರಾಜ್ಯ

ಮಾನಸಿಕ ಸಮಸ್ಯೆಗಳ ಬಗೆಗೆ ಬಹಿರಂಗವಾಗಿ ಚರ್ಚೆಯಾಗಬೇಕು: ರಾಮನಾಥ ಕೋವಿಂದ್

"ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಬಹಿರಂಗವಾಗಿ ಮಾತನಾಡಲು ಪ್ರಾರಂಭಿಸಬೇಕಿದೆ.

ಬೆಂಗಳುರು: "ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಬಹಿರಂಗವಾಗಿ ಮಾತನಾಡಲು ಪ್ರಾರಂಭಿಸಬೇಕಿದೆ. ಇದರಿಂದಾಗಿ ಖಿನ್ನತೆಯಂತಹ ಸಮಸ್ಯೆಯನ್ನು ತೊಡೆದುಹಾಕಬಹುದು." ರಾಷ್ಟ್ರಪತಿ ರಾಮನಾಥ ಕೋವಿಂದ್ ಹೇಳಿದ್ದಾರೆ.
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆಯ(ನಿಮ್ಹಾನ್ಸ್) 22ನೇ ಘಟಿಕೋತ್ಸವ ಸಮಾರಂಭದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದ್ದರು. ಮಾನಸಿಕ ಆರೋಗ್ಯ ಸಮಸ್ಯೆಗಳಂತೆಯೇ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ವೃತ್ತಿಪರರ ಕೊರತೆ ಮನೋವಿಜ್ಞಾನಿಗಳು ಮತ್ತು ಮನೋವೈದ್ಯರ ಕೊರತೆ ವಿಚಾರಗಳಾನ್ನು ಸಹ ಅವರು  ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.
"ದೇಶದ ಶೇ. 10ರಷ್ಟು  ಜನ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಿಮ್ಹಾನ್ಸ್‌ ರಾಷ್ಟ್ರೀಯ ಮಾನಸಿಕ ಆರೋಗ್ಯದ ಬಗ್ಗೆ ನಡೆಸಿರುವ ಸಮೀಕ್ಷೆ ವರದಿ ಆತಂಕ ಹುಟ್ಟಿಸುವಂತಿದೆ.  ದೇಶದಲ್ಲಿನ ಮಾನಸಿಕ ಆರೋಗ್ಯ ಸಮಸ್ಯೆಯುಳ್ಳವರ ಸಂಖ್ಯೆ ಜಪಾನ್ ನ ಒಟ್ಟು ಜನಸಂಖ್ಯೆಗಿಂತ ಹೆಚ್ಚಾಗಿದೆ, ಮಾನಸಿಕ ಆರೋಗ್ಯ ಸಮಸ್ಯೆ ಹೆಚ್ಚಾಗಿ ಯುವಕರು, ನಗರವಾಸಿಗಳಲ್ಲಿ ಕಾಣಿಸಿಕೊಳ್ಳುತ್ತಿದೆ. 
"ದೇಶದ ಮಾನಸಿಕ ಆರೋಗ್ಯ ಕ್ಷೇತ್ರಕ್ಕೆ ನಿಮ್ಹಾನ್ಸ್‌ ಕೊಡುಗೆ ಅನನ್ಯವಾದದ್ದು. ಪ್ರತಿ ವರ್ಷ ವಿದೇಶಿಯರು ಸೇರಿ 7 ಲಕ್ಷ ರೋಗಿಗಳು ನಿಮ್ಹಾನ್ಸ್‌ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ರೋಗಿಗಳಲ್ಲಿ ಇಬ್ಬರು ಬಡತನದಿಂದ ಬಂದಿದ್ದು ಅವರಿಗೆ ಇಲ್ಲಿ ಉಚಿತ ಚಿಕಿತ್ಸೆ ನೀಡುತ್ತಿರುವುದು ಶ್ಲಾಘನೀಯ" ರಾಷ್ಟ್ರಪತಿಗಳು ಹೇಳಿದರು.
ಘಟಿಕೋತ್ಸವ ಸಮಯದಲ್ಲಿ ರಾಷ್ಟ್ರಪತಿಗಳು ಅದ್ಭುತ ಸಾಧನೆ ಮಾಡಿದ್ದ ಒಟ್ಟು ಹನ್ನೊಂದು ವಿದ್ಯಾರ್ಥಿಗಳಿಗೆ ಪದಕ ಪ್ರಧಾನ ಮಾಡಿದರು. 
ಇದೇ ವೇಳೆ 100 ಕೋಟಿ ರೂ. ವೆಚ್ಚದ ಮೂರು ಎಂಆರ್ ಐ ಜತೆಗೆ ಆಪರೇಷನ್ ಥಿಯೇಟರ್ ಗಲನ್ನು, ವೈದ್ಯಕೀಯ ಸೈಕ್ಲೋಟ್ರಾನ್ ಹಾಗು ನರವಿಜ್ಞಾನಕ್ಕೆ ಸೀಮಿತವಾದ ವಿಶೇಷ ಬ್ಲಾಕ್ ನ್ನು ರಾಷ್ಟ್ರಪತಿ ಕೋವಿಂದ್ ಉದ್ಘಾಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT