ಸಾಂದರ್ಭಿಕ ಚಿತ್ರ 
ರಾಜ್ಯ

ಕೆಎಸ್ಆರ್ ಟಿಸಿ ನಿವೃತ್ತ ನೌಕರರ ಪತ್ನಿಗೆ ಬಸ್ ಪಾಸು ವಿತರಣೆ: ಸರ್ಕಾರ ನಿರ್ಧಾರ

ಎಲ್ಲಾ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರ ಪತ್ನಿಯರಿಗೆ ರಾಜ್ಯ ...

ಬೆಂಗಳೂರು: ಎಲ್ಲಾ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರ ಪತ್ನಿಯರಿಗೆ ರಾಜ್ಯ ಸರ್ಕಾರ ಬಸ್ ಪಾಸ್ ನೀಡಲಿದೆ. ವರ್ಷಕ್ಕೆ 500 ರೂಪಾಯಿ ನೀಡಿದರೆ ಅವರು ರಾಜ್ಯದ ಯಾವುದೇ ಭಾಗದಲ್ಲಿ ಸಾಮಾನ್ಯ ಮತ್ತು ಎಕ್ಸ್ ಪ್ರೆಸ್ ಬಸ್ ನಲ್ಲಿ ಕಾಯ್ದಿರಿಸದ ಸೀಟಿನಲ್ಲಿ ಪ್ರಯಾಣಿಸಬಹುದು. 
ಬಸ್ಸಿನ ಪ್ರಯಾಣ ದರದ ಶೇಕಡಾ 50 ಭಾಗ ನೀಡಿ ಸಾರಿಗೆ ನಿಗಮದ ಅಧಿಕಾರಿಗಳು ಮತ್ತು ಅವರ ಪತ್ನಿ ಪ್ರಮುಖ ಸೇವೆಗಳ ಬಸ್ಸುಗಳಲ್ಲಿ ಪ್ರಯಾಣಿಸಬಹುದಾಗಿದೆ.
ಮುಖ್ಯಮಂತ್ರಿಗಳ ಶಿಫಾರಸಿನಂತೆ ರಾಜ್ಯ ರಸ್ತೆ ಸಾರಿಗೆ ನಿಗಮದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಮಂಡ್ಯ ಜಿಲ್ಲೆಯ ಜಕ್ಕನಹಳ್ಳಿಯಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ 2 ಎಕರೆ ಮತ್ತು ಚಿತ್ರದುರ್ಗ ಜಿಲ್ಲೆಯ ಹೊಳಕೆರೆಯಲ್ಲಿ ಬಸ್ ನಿಲ್ದಾಣಕ್ಕೆ 1 ಎಕರೆ ಭೂಮಿಯನ್ನು ಪಡೆಯುವ ಕುರಿತು ಕೂಡ ನಿರ್ಧರಿಸಲಾಯಿತು. 
ಜನವರಿ 4ರಿಂದ ಪುದುಚೆರಿಗೆ ಕೆಎಸ್ ಆರ್ ಟಿಸಿ ಹೊಸ ರಾಜಹಂಸ ಬಸ್ಸುಗಳ ಸೇವೆಯನ್ನು ಆರಂಭಿಸಲಿದೆ. ಇಲ್ಲಿಗೆ ಪ್ರಯಾಣ ದರವನ್ನು 410 ಎಂದು ನಿಗದಿಪಡಿಸಲಾಗಿದ್ದು ಬೆಂಗಳೂರಿನಿಂದ ರಾತ್ರಿ 10 ಗಂಟೆಗೆ ಬಸ್ ಹೊರಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT