ಸಫಾಯಿ ಕರ್ಮಚಾರಿಗಳು 
ರಾಜ್ಯ

ಸಫಾಯಿ ಕರ್ಮಚಾರಿಗಳಿಗೆ ಪಾಲಿಗೆ ಸಿಹಿ ತಂದ ನೂತನ ವರ್ಷ

ಸಫಾಯಿ ಕರ್ಮಚಾರಿಗಳು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ, ಅವರ ಏಳಿಗೆಗೆ ಸಹಾಯವಾಗುವಂತೆ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.

ಬೆಂಗಳೂರು: ಸಫಾಯಿ ಕರ್ಮಚಾರಿಗಳು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ, ಅವರ ಏಳಿಗೆಗೆ ಸಹಾಯವಾಗುವಂತೆ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಈ ಸಮುದಾಯವನ್ನು ಸಾರ್ವತ್ರಿಕ ಆರೋಗ್ಯ ಯೋಜನೆಯಡಿಯಲ್ಲಿ ತರುವುದು ಹಾಗೂ ಕೈನಿಂದ ಶುಚಿಮಾಡುವ ಕ್ರಮವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸುವ ಆಶಯ ಸರ್ಕಾರದ ಕ್ರಮದಲ್ಲಿದೆ. ಸಫಾಯಿ ಕರ್ಮಚಾರಿಗಳು ಗೌರವಾನ್ವಿತ ಜೀವನ ನಡೆಸುವಂತೆ ಮಾಡಲು ಹಲವಾರು ಯೋಜನೆಗಳನ್ನು ಜಾರಿಗೆ ತರಬೇಕಿದೆ ಎಂದು ಡಿ.27 ರಂದು ಮುಖ್ಯ ಕಾರ್ಯದರ್ಶಿ ನೇತೃತ್ವದ ನಡೆದ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳ ಸಭೆಯಲ್ಲಿ ನಿರ್ಣಯಿಸಲಾಗಿದೆ.
ರಾಜ್ಯದ ನೌಕರ ಸಂಘಟನೆಗಳಿಗೆ ಕರ್ನಾಟಕ ಸಫಾಯಿ ಕರ್ಮಚಾರಿಗಳ ಅಭಿವೃದ್ದಿ ನಿಗಮವು ಕ್ರೆಡಿಟ್ ನೀಡಲಿದ್ದು ನಿಗಮಕ್ಕೆ ಸಬ್ಸಿಡಿ ದರದಲ್ಲಿ ಸ್ವಚ್ಚತಾ ಯಂತ್ರಗಳನ್ನು ಒದಗಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದೇ ವೇಳೆ  ಲೋಡ್ ಅನ್ ಲೋಡ್ ಮಾಡುವ ಕಾರ್ಮಿಕರು, ಚಾಲಕರು ಮತ್ತು ಸಪಾಯಿ ಕರ್ಮಚಾರಿಗಳುಗಳಿಗೆ ಕನಿಷ್ಠ ವೇತನ ಯೋಜನೆ ಮತ್ತು ಸಾಮಾಜಿಕ ಮತ್ತು ವಿತ್ತೀಯ ಸುರಕ್ಷತೆ ಯೋಜನೆಗಳಾದ ಭಾವಿಷ್ಯ ನಿಧಿ ಮತ್ತು ಇಎಸ್ಐ ಯೋಜನೆಗಳಿಗೆ ಇವರನ್ನು ಪರಿಗಣಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ.
"ರಕ್ಷಣಾತ್ಮಕ ಗೇರ್ ಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಪೂರೈಸುವ ಮೂಲಕ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಈ ಸುರಕ್ಷತಾ ಲಭ್ಯವಾಗಿವಂತೆ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡುತ್ತಿದ್ದೇವೆ" ಮುಖ್ಯ ಕಾರ್ಯದರ್ಶಿಯವರ ಕಛೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು: ಡಿಎಂಕೆಗೆ SIR ಹೊಡೆತ: ಕರಡು ಮತದಾರರ ಪಟ್ಟಿಯಿಂದ 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!

ಬೇಡಿಕೆ ಈಡೇರಿದೆ, ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ; ಹೈಕಮಾಂಡ್ ಅವರ ಪರ ಇರೋದ್ರಿಂದಲೇ ಅವರು ಸಿಎಂ: ಡಿ.ಕೆ ಶಿವಕುಮಾರ್

ಅಮಿತ್ ಶಾ 'ನಾಲಾಯಕ್ ಹೋಮ್ ಮಿನಿಸ್ಟರ್' ಎಂದ ಪ್ರಿಯಾಂಕ್ ಖರ್ಗೆ! ಕ್ಷಮೆಗೆ ಪಟ್ಟು, ಬಿಜೆಪಿ ಪ್ರತಿಭಟನೆ

ಕೋಲಾರದಲ್ಲಿ 'ಸರ್ಕಾರಿ ಜಾಗ ಕಬಳಿಕೆ' ಆರೋಪ: ಸದನದಲ್ಲಿ ಸಚಿವ ಕೃಷ್ಣ ಬೈರೇಗೌಡ ಕೊಟ್ಟ ಸ್ಪಷ್ಟನೆ ಏನು?

ವಿಧಾನಪರಿಷತ್: ವಿಪಕ್ಷಗಳ ಪ್ರತಿಭಟನೆ ನಡುವೆ 'ದ್ವೇಷ ಭಾಷಣ' ಮಸೂದೆಗೆ ಮೇಲ್ಮನೆ ಅಂಗೀಕಾರ!

SCROLL FOR NEXT