ಭವ್ಯಸಿಂಗ್ 
ರಾಜ್ಯ

ಬೆಂಗಳೂರು: ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು

ತಾನು ಓದುತ್ತಿದ್ದ ಕಾಲೇಜಿನಲ್ಲೇ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಬೆಂಗಳುರಿನ ಹೆಣ್ಣೂರು ಸಮೀಪ ವಿಬಿಆರ್ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ.

ಬೆಂಗಳೂರು: ತಾನು ಓದುತ್ತಿದ್ದ ಕಾಲೇಜಿನಲ್ಲೇ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಬೆಂಗಳುರಿನ ಹೆಣ್ಣೂರು ಸಮೀಪ ವಿಬಿಆರ್ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ.
ಎಚ್‌ಬಿಆರ್ ಲೇಔಟ್ 4ನೇ ಬ್ಲಾಕ್‌ನಲ್ಲಿರುವ ವಿಬಿಆರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ  ಭವ್ಯಸಿಂಗ್ (17) ಆತ್ಮಹತ್ಯೆ ಮಾಡಿಕೊಂಡ ಯುವತಿ.ೀಕೆಯ ದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕಾಲೇಜು ಆಡಳಿತ ಮಂಡಳಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದಿದೆ.
ಆದರೆ ವಿದ್ಯಾರ್ಥಿನಿಯ ತಂದೆ ಜಗನ್ನಾಥ್ ಸಿಂಗ್ ಪ್ರಕಾರ ಇದು ಆತ್ಮಹತ್ಯೆಯಲ್ಲ. "ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯವಳಲ್ಲ,ೀ ಘಟನೆಯ ಹಿಂದೆ ಯಾರದೋ ಕೈವಾಡವಿದೆ" ಎನ್ನುವ ಸಿಂಗ್ ಮಗಳ ಸಾವಿನ ಕುರಿತಂತೆ ಹೆಣ್ಣೂರು ಪೋಲೀಸರಿಗೆ ದೂರು ಸಲ್ಲಿಸಿದ್ದಾರೆ. ದೂರಿನ ಅನ್ವಯ ಪೋಲೀಸರು  ಅನುಮಾನಾಸ್ಪದ ಸಾವು (ಐಪಿಸಿ 174ಸಿ) ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಮೂಲತಃ ಚಿಂತಾಮಣಿ ತಾಲೂಕಿನವಳಾದ ಭವ್ಯಸಿಂಗ್ ಜೂನ್ ತಿಂಗಳಿನಲ್ಲಿ ಪಿಯು ವ್ಯಾಸಂಗಕ್ಕಾಗಿ ಕಾಲೀಜಿಗೆ ದಾಖಲಾಗಿದ್ದಳು. ಕಾಲೇಜಿನ ಪಕ್ಕದಲ್ಲಿದ್ದ ಹಾಸ್ಟೆಲ್ ನಲ್ಲಿ ವಾಸವಿದ್ದಳೆನ್ನಲಾಗಿದೆ. ಶನಿವಾರ ಬೆಳಗ್ಗೆ ಹಾಸ್ಟೆಲ್ ವಿದ್ಯಾರ್ಥಿಗಳು ಉಪಹಾರಕ್ಕೆ ಹೊರಟಿದ್ದಾಗ ವರಾಂಡಾದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಭವ್ಯ ಶವ ಕಾಣಿಸಿದ್ದು ಅವರು ಭಯಭೀತರಾಗಿ ಚೀರಿದ್ದಾರೆ. ಚೀರಾಟ ಕೇಳಿದ ಹಾಸ್ಟೆಲ್ ವಾರ್ಡನ್ ತಕ್ಷಣ ಪೋಲೀಸರಿಗೆ ಮಾಹಿತಿ ನೀಡಿದರು.
"ಶನಿವಾರ ಬೆಳಗಿನಿಂದಲೇ ಭವ್ಯ ಕಾಣಿಸಿರಲಿಲ್ಲ ಎಂದು ಆಕೆಯ ಹಾಸ್ಟೆಲ್ ಸಹಪಾಠಿಗಳು ಹೇಳಿದ್ದಾರೆ. ಶುಕ್ರವಾರ ರಾತ್ರಿಯೇ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು. ಯಾವ ಕಾರಣಕ್ಕೆ ಆಕೆ ಈ ನಿರ್ಧಾರಕ್ಕೆ ಬಂಡಳೆನ್ನುವುದು ತಿಳಿದಿಲ್ಲ. ಮೃತದೇಹದ ಮರಣೋತ್ತರ ಪರಿಖ್ಷೆ ವರದಿ ಇನ್ನಷ್ಟೇ ಬರಬೇಕಿದ್ದು ಅದು ಕೈಸೇರಿದ ಬಳಿಕ ಮುಂದಿನ ಕ್ರಮದ ಕುರಿತು ನಿರ್ಧರಿಸಲಾಗುತ್ತದೆ" ಎಂದು ಕಾಲೇಜು ಆಡಳಿತಾಧಿಕಾರಿಗಳು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT