ರಾಜ್ಯ

ಗುಲ್ಬರ್ಗಾ: ಹೆಲ್ಮೆಟ್ ರಹಿತ ಸವಾರರಿಗೆ ಗುಲಾಬಿ ಕೊಟ್ಟು ಮನವೊಲಿಸಿದ ಮಕ್ಕಳು

ಸುರಕ್ಷಿತ ವಾಹನ ಚಾಲನೆಯ ಪ್ರಾಮುಖ್ಯತೆಯನ್ನು ತಿಳಿಸಲು ಮತ್ತು ಆ ನಿಟ್ಟಿನಲ್ಲಿ ಜನತೆಯಲ್ಲಿ ಜಾಗೃತಿ...

ಗುಲ್ಬರ್ಗ: ಸುರಕ್ಷಿತ ವಾಹನ ಚಾಲನೆಯ ಪ್ರಾಮುಖ್ಯತೆಯನ್ನು ತಿಳಿಸಲು ಮತ್ತು ಆ ನಿಟ್ಟಿನಲ್ಲಿ ಜನತೆಯಲ್ಲಿ ಜಾಗೃತಿ ಮೂಡಿಸಲು ಗುಲ್ಬರ್ಗಾದಲ್ಲಿ ಮಕ್ಕಳು ದ್ವಿಚಕ್ರ ವಾಹನ ಸವಾರರಿಗೆ ಕಂಪು ಗುಲಾಬಿ ನೀಡಿದರು.
ಹೆಲ್ಮೆಟ್ ಧರಿಸದಿರುವ ಸವಾರರನ್ನು ತಡೆದು ನಿಲ್ಲಿಸಿದ ಮಕ್ಕಳು ಅವರಿಗೆ ಗುಲಾಬಿ ಕೊಟ್ಟು ಸುರಕ್ಷತೆಗೆ ಹೆಲ್ಮೆಟ್ ಧರಿಸುವ ಅಗತ್ಯದ ಬಗ್ಗೆ ಮನವರಿಕೆ ಮಾಡಿದರು.ಸಾರ್ವಜನಿಕ ಅರಿವು ಕಾರ್ಯಕ್ರಮದ ಅಂಗವಾಗಿ ಈ ಅಭಿಯಾನ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಜಯ ಪ್ರಕಾಶ್ ತಿಳಿಸಿದ್ದಾರೆ.
ಭಾರತದಲ್ಲಿ ಪ್ರತಿ 4 ನಿಮಿಷಕ್ಕೊಮ್ಮೆ ರಸ್ತೆ ಅಪಘಾತದಲ್ಲಿ ಒಬ್ಬರು ಸಾಯುತ್ತಿದ್ದಾರೆ. ಅದರಲ್ಲಿ ಶೇಕಡಾ 25ರಷ್ಟು ದ್ವಿಚಕ್ರ ವಾಹನ ಸವಾರರಾಗಿದ್ದಾರೆ. 2016ರಲ್ಲಿ ದ್ವಿಚಕ್ರ ವಾಹನದಲ್ಲಿ ಒಟ್ಟು 2,784 ಅಪಘಾತಗಳು ಸಂಭವಿಸಿದ್ದು ಅವುಗಳಲ್ಲಿ 101 ಮಾರಣಾಂತಿಕ ಅಪಘಾತಗಳಾಗಿ 104 ಜನ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT