ಮಂತ್ರಿ ಮಾಲ್ 
ರಾಜ್ಯ

ಬೆಂಗಳೂರು: ಸುರಕ್ಷತೆ ದೃಷ್ಟಿಯಿಂದ ಮಂತ್ರಿಮಾಲ್ ಪುನರಾರಂಭ ಸದ್ಯಕ್ಕಿಲ್ಲ

ಹಿಂಬದಿಯ ಗೋಡೆ ಕುಸಿತದಿಂದಾಗಿ ಕಳೆದ 16 ರಿಂದ ಮುಚ್ಚಲ್ಪಟ್ಟಿರುವ ಮಂತ್ರಿ ಮಾಲ್ ಸದ್ಯಕ್ಕೆ ಪುನರಾರಂಭವಾಗುವ ಸಾಧ್ಯತೆಯಿಲ್ಲ....

ಬೆಂಗಳೂರು:  ಹಿಂಬದಿಯ ಗೋಡೆ ಕುಸಿತದಿಂದಾಗಿ ಕಳೆದ 16 ರಿಂದ ಮುಚ್ಚಲ್ಪಟ್ಟಿರುವ ಮಂತ್ರಿ ಮಾಲ್ ಸದ್ಯಕ್ಕೆ ಪುನರಾರಂಭವಾಗುವ ಸಾಧ್ಯತೆಯಿಲ್ಲ.  ತಜ್ಞರ ಸಮಿತಿ ನಡೆಸಿದ ಪರಿಶೀಲನೆಯಲ್ಲಿ ಮಾಲ್ ಒಪನ್ ಮಾಡುವುದು ಸದ್ಯಕ್ಕೆ ಸುರಕ್ಷಿತವಲ್ಲ ಎಂಬ ಅಭಿಪ್ರಾಯ ವ್ಯಕ್ತವಾದ್ದರಿಂದ ಸದ್ಯಕ್ಕೆ ಪುನರಾರಂಭ ಇಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

ಕಳೆದ ಜನವರಿ 16 ರಂದು ಗೋಡೆ ಕುಸಿತದಿಂದಾಗಿ ಮಾಲ್ ನ ಇಬ್ಬರು ಕೆಲಸಗಾರರು ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ಅಂದಿನಿಂದ ಸುರಕ್ಷತೆಯ ದೃಷ್ಟಿಯಿಂದ ಮಾಲ್ ಅನ್ನು ಮುಚ್ಚಲಾಗಿದೆ.

ಕಟ್ಟಡದಲ್ಲಿ ಅಳವಡಿಸಲಾಗಿರುವ ಹವಾ ನಿಯಂತ್ರಿತ ವ್ಯವಸ್ಥೆಯಿಂದ ಬಂದ ನೀರು ಕಟ್ಟಡದ ಹಿಂಬದಿಯ ಗೋಡೆಯನ್ನು ತೀವ್ರವಾಗಿ ಹಸಿಗೊಳಿಸಿದ್ದ ಕಾರಣದಿಂದ ಆ ಗೋಡೆ ಕುಸಿದಿದೆ ಎಂದು ಆಯುಕ್ತರು ವಿವರಿಸಿದರು.

ಈ ಪ್ರಕರಣದ ನಂತರ, ಕಟ್ಟಡದ ಗುಣಮಟ್ಟವನ್ನು ಪರೀಕ್ಷಿಸಲು ಬಿಬಿಎಂಪಿ ನೇಮಿಸಿದ್ದ ತಜ್ಞರ ಸಮಿತಿ ತನ್ನ ವರದಿಯನ್ನು ಬಿಬಿಎಂಪಿಗೆ ಸಲ್ಲಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು ತಜ್ಞರ ವರದಿ ಅಂಶಗಳನ್ನು ಬಹಿರಂಗಗೊಳಿಸಲಿಲ್ಲ. ತಜ್ಞರ ವರದಿಯ ಬಗ್ಗೆ ಕೂಲಂಕಷ ಚರ್ಚೆ ನಡೆಸಿದ ನಂತರವಷ್ಟೇ ಮಂತ್ರಿ ಮಾಲ್ ಪುನರಾರಂಭಕ್ಕೆ ಅನುಮತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT