ಮಂತ್ರಿ ಮಾಲ್ 
ರಾಜ್ಯ

ಬೆಂಗಳೂರು: ಸುರಕ್ಷತೆ ದೃಷ್ಟಿಯಿಂದ ಮಂತ್ರಿಮಾಲ್ ಪುನರಾರಂಭ ಸದ್ಯಕ್ಕಿಲ್ಲ

ಹಿಂಬದಿಯ ಗೋಡೆ ಕುಸಿತದಿಂದಾಗಿ ಕಳೆದ 16 ರಿಂದ ಮುಚ್ಚಲ್ಪಟ್ಟಿರುವ ಮಂತ್ರಿ ಮಾಲ್ ಸದ್ಯಕ್ಕೆ ಪುನರಾರಂಭವಾಗುವ ಸಾಧ್ಯತೆಯಿಲ್ಲ....

ಬೆಂಗಳೂರು:  ಹಿಂಬದಿಯ ಗೋಡೆ ಕುಸಿತದಿಂದಾಗಿ ಕಳೆದ 16 ರಿಂದ ಮುಚ್ಚಲ್ಪಟ್ಟಿರುವ ಮಂತ್ರಿ ಮಾಲ್ ಸದ್ಯಕ್ಕೆ ಪುನರಾರಂಭವಾಗುವ ಸಾಧ್ಯತೆಯಿಲ್ಲ.  ತಜ್ಞರ ಸಮಿತಿ ನಡೆಸಿದ ಪರಿಶೀಲನೆಯಲ್ಲಿ ಮಾಲ್ ಒಪನ್ ಮಾಡುವುದು ಸದ್ಯಕ್ಕೆ ಸುರಕ್ಷಿತವಲ್ಲ ಎಂಬ ಅಭಿಪ್ರಾಯ ವ್ಯಕ್ತವಾದ್ದರಿಂದ ಸದ್ಯಕ್ಕೆ ಪುನರಾರಂಭ ಇಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

ಕಳೆದ ಜನವರಿ 16 ರಂದು ಗೋಡೆ ಕುಸಿತದಿಂದಾಗಿ ಮಾಲ್ ನ ಇಬ್ಬರು ಕೆಲಸಗಾರರು ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ಅಂದಿನಿಂದ ಸುರಕ್ಷತೆಯ ದೃಷ್ಟಿಯಿಂದ ಮಾಲ್ ಅನ್ನು ಮುಚ್ಚಲಾಗಿದೆ.

ಕಟ್ಟಡದಲ್ಲಿ ಅಳವಡಿಸಲಾಗಿರುವ ಹವಾ ನಿಯಂತ್ರಿತ ವ್ಯವಸ್ಥೆಯಿಂದ ಬಂದ ನೀರು ಕಟ್ಟಡದ ಹಿಂಬದಿಯ ಗೋಡೆಯನ್ನು ತೀವ್ರವಾಗಿ ಹಸಿಗೊಳಿಸಿದ್ದ ಕಾರಣದಿಂದ ಆ ಗೋಡೆ ಕುಸಿದಿದೆ ಎಂದು ಆಯುಕ್ತರು ವಿವರಿಸಿದರು.

ಈ ಪ್ರಕರಣದ ನಂತರ, ಕಟ್ಟಡದ ಗುಣಮಟ್ಟವನ್ನು ಪರೀಕ್ಷಿಸಲು ಬಿಬಿಎಂಪಿ ನೇಮಿಸಿದ್ದ ತಜ್ಞರ ಸಮಿತಿ ತನ್ನ ವರದಿಯನ್ನು ಬಿಬಿಎಂಪಿಗೆ ಸಲ್ಲಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು ತಜ್ಞರ ವರದಿ ಅಂಶಗಳನ್ನು ಬಹಿರಂಗಗೊಳಿಸಲಿಲ್ಲ. ತಜ್ಞರ ವರದಿಯ ಬಗ್ಗೆ ಕೂಲಂಕಷ ಚರ್ಚೆ ನಡೆಸಿದ ನಂತರವಷ್ಟೇ ಮಂತ್ರಿ ಮಾಲ್ ಪುನರಾರಂಭಕ್ಕೆ ಅನುಮತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT