ರಾಜ್ಯ

ಎಪಿಎಂಸಿ ಅಧ್ಯಕ್ಷ ಶ್ರೀನಿವಾಸ್ ಮೇಲೆ ಫೈರಿಂಗ್: ಸಹೋದರ ಪಾಯ್ಸನ್ ರಾಮ ಪೊಲೀಸ್ ವಶಕ್ಕೆ

Vishwanath S

ಬೆಂಗಳೂರು: ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಿವಾಸ್ ಸಹೋದರ ಪಾಯ್ಸನ್ ರಾಮನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯಲಹಂಕದ ಕೋಗಿಲು ಗೇಟ್ ಬಳಿ ಶ್ರೀನಿವಾಸ್ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದರು. ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಶ್ರೀನಿವಾಸ್ ಮತ್ತು ಕಾರು ಚಾಲಕ ಮೂರ್ತಿ ಅವರನ್ನು ಹೆಬ್ಬಾಳದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಜಾಗೃತ ಕ್ರಮವಾಗಿ ಪೊಲೀಸರು ಆಸ್ಪತ್ರೆಯ ಎದುರು 2 ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಿದೆ. ಯಲಹಂಕದ ಪೊಲೀಸರು, ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಶ್ರೀನಿವಾಸ್ ಅಲಿಯಾಸ್ ಡಾಬಾ ಸೀನಾ ರೌಡಿಶೀಟರ್ ಪಾಯ್ಸನ್ ರಾಮನ ಸ್ವಂತ ಅಣ್ಣನಾಗಿದ್ದು ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಎಪಿಎಂಸಿ ಸದಸ್ಯರಾಗಿ ಆಯ್ಕೆಯಾಗಿದ್ದರು.

SCROLL FOR NEXT