ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ ನಾಳೆ ಆರಂಭ

ವಿಧಾನ ಮಂಡಲ ಜಂಟಿ ಅಧಿವೇಶನ ನಾಳೆ ಆರಂಭವಾಗಲಿದೆ. ಬರ ನಿರ್ವಹಣೆ, ಕಾನೂನು ಪಾಲನೆಯಲ್ಲಿ...

ಬೆಂಗಳೂರು:  ವಿಧಾನ ಮಂಡಲ ಜಂಟಿ ಅಧಿವೇಶನ ನಾಳೆ ಆರಂಭವಾಗಲಿದೆ. ಬರ ನಿರ್ವಹಣೆ, ಕಾನೂನು ಪಾಲನೆಯಲ್ಲಿ ವಿಫಲ ಮೊದಲಾದ ವಿಷಯಗಳನ್ನಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ.
ಉಭಯ ಸದನಗಳ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ನಾಳೆ ಬೆಳಗ್ಗೆ 11 ಗಂಟೆಗೆ ಭಾಷಣ ಮಾಡಲಿದ್ದಾರೆ. ಬಳಿಕ 15 ನಿಮಿಷಗಳ ಸಭೆ ಬಳಿಕ ಉಭಯ ಸದನಗಳು ಮತ್ತೆ ಸೇರಲಿದ್ದು, ಕಳೆದ ಅಧಿವೇಶನದ ನಂತರ ನಿಧನರಾದವರಿಗೆ ಸಂತಾಪ ಸೂಚಿಸಿ ಮಂಗಳವಾರಕ್ಕೆ ಕಲಾಪ ಮುಂದೂಡಿಕೆಯಾಗಲಿದೆ.
ವರ್ಷದ ಆರಂಭದಲ್ಲಿ ನಡೆಯುವ ಅಧಿವೇಶನವನ್ನು 5 ದಿನಕ್ಕೆ ನಿಗದಿಪಡಿಸುವುದು ಸರಿಯಲ್ಲ, 15 ದಿನ ನಡೆಸುವ ನಿಯಮ ಮಾಡಿಕೊಂಡಿದ್ದರೂ ಅದನ್ನು ಜಾರಿಗೊಳಿಸಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಜಾರಿಗೆ ತಂದ ನಿಯಮ ಪ್ರಕಾರ, ಆರಂಭದ ಅಧಿವೇಶನ 15 ದಿನ, ಬಜೆಟ್ ಅಧಿವೇಶನ 20 ದಿನ, ಮಳೆಗಾಲ 15 ಮತ್ತು ಚಳಿಗಾಲದ ಅಧಿವೇಶನ 10 ದಿನ ಸೇರಿ ಒಟ್ಟು 60 ದಿನ ಕಲಾಪ ನಡೆಸಬೇಕು. ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಲಾಗುವುದು ಎಂದರು.
 ವಿರೋಧ ಪಕ್ಷ ಸಜ್ಜು: ರಾಜ್ಯದಲ್ಲಿ 160 ತಾಲ್ಲೂಕುಗಳು ಬರಪೀಡಿತ ಎಂದು ಘೋಷಿಸಿದ್ದರೂ ಪರಿಹಾರ ಕಾಮಗಾರಿಯನ್ನು ಸಮರೋಪಾದಿಯಲ್ಲಿ ಕೈಗೊಂಡಿಲ್ಲ. ಈ ವಿಷಯದಲ್ಲಿ ರಾಜ್ಯ ಸರ್ಕಾರ ನಿಷ್ಕಿಯವಾಗಿದೆ ಎಂದು ಆರೋಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT