ರಮಾನಾಥ ರೈ 
ರಾಜ್ಯ

ಮೂರು ವರ್ಷಗಳಲ್ಲಿ 262 ಕಾಡು ಪ್ರಾಣಿಗಳ ಹತ್ಯೆ: ಅರಣ್ಯ ಸಚಿವ ರಮಾನಾಥ ರೈ

ಮೋಜು ಹಾಗೂ ಮಾಂಸಕ್ಕಾಗಿ ಕಳೆದ 3 ವರ್ಷಗಳಲ್ಲಿ 262 ಕಾಡು ಪ್ರಾಣಿಗಳನ್ನು ಹತ್ಯೆ ಮಾಡಲಾಗಿದೆ. ಶಿವಮೊಗ್ಗ ಮತ್ತು ಚಾಮರಾಜ ನಗರ ಜಿಲ್ಲೆಗಳಲ್ಲೇ ಅತಿ...

ಬೆಂಗಳೂರು: ಮೋಜು ಹಾಗೂ ಮಾಂಸಕ್ಕಾಗಿ ಕಳೆದ 3 ವರ್ಷಗಳಲ್ಲಿ 262 ಕಾಡು ಪ್ರಾಣಿಗಳನ್ನು ಹತ್ಯೆ ಮಾಡಲಾಗಿದೆ. ಶಿವಮೊಗ್ಗ ಮತ್ತು ಚಾಮರಾಜ ನಗರ ಜಿಲ್ಲೆಗಳಲ್ಲೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾಡು ಪ್ರಾಣಿಗಳನ್ನು ಕೊಲ್ಲಲಾಗಿದೆ ಎಂದು ಅರಣ್ಯ ಸಚಿವ ರಮಾಮಾಥ ರೈ ಹೇಳಿದ್ದಾರೆ.

ಬಿಜೆಪಿ ಎಂಎಲ್ ಸಿ ಸುನೀಲ್ ಸುಬ್ರಮಣ್ಯ ಅವರ ಪ್ರಶ್ನೆಗೆ ವಿಧಾನ ಪರಿಷತ್ ನಲ್ಲಿ ಉತ್ತರಿಸಿದ ಸಚಿವ ರಮಾನಾಥ ರೈ ರಾಜ್ಯದ 11 ಅರಣ್ಯ ವಿಭಾಗಗಳಲ್ಲಿ ಪ್ರಾಣಿಗಳನ್ನು ಕೊಲ್ಲಲಾಗಿದೆ, ಚಾಮರಾಜನಗರದಲ್ಲಿ ಅತಿ ಹೆಚ್ಚಿನ ಅಂದರೆ 90 ಪ್ರಾಣಿಗಳನ್ನು ಹತ್ಯೆ ಮಾಡಲಾಗಿದೆ,  ಅದೇ ರೀತಿ ಶಿವಮೊಗ್ಗ ಅರಣ್ಯ ಪ್ರದೇಶದಲ್ಲಿ 51 ಪ್ರಾಣಿಗಳು ಕೊಲ್ಲಲ್ಪಟ್ಟಿವೆ. ಚಿಕ್ಕಮಗಳೂರಿನಲ್ಲಿ 32 ಮತ್ತು ಉತ್ತರ ಕನ್ನಡದಲ್ಲಿ 26 ಪ್ರಾಣಿಗಳನ್ನು ಕೊಲ್ಲಲಾಗಿದೆ ಎಂದು ತಿಳಿಸಿದ್ದಾರೆ.

262 ಪ್ರಾಣಿಗಳ ಹತ್ಯೆ ಸಂಬಂಧ ಕೇಸು ದಾಖಲಾಗಿದೆ ಮತ್ತು ಕೆಲವು ಪ್ರಕರಣಗಳಲ್ಲಿ ತಪ್ಪಿತಸ್ಥರನ್ನು ಬಂಧಿಸಲಾಗಿದೆ. ಚಿಕ್ಕಮಗಳೂರಿನ ಬೇಟೆ ಪ್ರಕರಣ ಸಂಬಂಧ ಒಟ್ಟು 14 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ,

ಇನ್ನೂ ಅರಣ್ಯದಲ್ಲಿ ಕಾಡ್ಗಿಚ್ಚು ಉಂಟಾಗು ಸಿಗರೇಟು ಮತ್ತು ಬೀಡಿ ಸೇವನೆ ಕಾರಣ ಎಂದು ರಮಾನಾಥ ರೈ ವಿವರಿಸಿದ್ದಾರೆ. ಅರಣ್ಯದಲ್ಲಿ ಬಿದಿರು ಹಾಗೂ ಹುಲ್ಲಿನ ಪೊದೆಗಳಿವೆ, ಬಿದಿರು ಬೊಂಬಿನ ತಿಕ್ಕಾಟದಿಂದಾಗಿ ಕಾಡಿನಲ್ಲಿ ಬೆಂಕಿ ಹೊತ್ತಿಕೊಳ್ಳಲು ಒಂದು ಕಾರಣವಾಗಿದೆ. ಜೊತೆಗೆ ಪ್ರವಾಸಿಗರ ದೂಮಪಾನ ಕೂಡ ಕಾಡ್ಗಿಚ್ಚಿಗೆ ಕಾರಣ ಎಂದು ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT