ಬಿಎಂಟಿಸಿ 
ರಾಜ್ಯ

ಮಾರ್ಚ್ 1ರಿಂದ ಬಿಎಂಟಿಸಿಯ ಎಸಿ ಬಸ್ ಗಳಲ್ಲಿ ನಗದುರಹಿತ ವ್ಯವಹಾರ

ಪ್ರಸಕ್ತ ವರ್ಷದ ಮಾರ್ಚ್ 1ರಿಂದ ಬಿಎಂಟಿಸಿ ಎಸಿ ವೊಲ್ವೋ ಬಸ್ ಗಳಲ್ಲಿ ಕ್ಯಾಶ್ ಲೆಸ್ ವ್ಯವಹಾರ ಆರಂಭಿಸಲಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಕಾಡುಗೋಡಿಗೆ...

ಬೆಂಗಳೂರು: ಪ್ರಸಕ್ತ ವರ್ಷದ ಮಾರ್ಚ್ 1ರಿಂದ ಬಿಎಂಟಿಸಿ ಎಸಿ ವೊಲ್ವೋ ಬಸ್ ಗಳಲ್ಲಿ  ಕ್ಯಾಶ್ ಲೆಸ್ ವ್ಯವಹಾರ ಆರಂಭಿಸಲಿದೆ.  ಕೆಂಪೇಗೌಡ ಬಸ್ ನಿಲ್ದಾಣದಿಂದ ಕಾಡುಗೋಡಿಗೆ ಸಂಚರಿಸುವ ಪೈಲಟ್ ಬಸ್ ಗಳಲ್ಲಿ ಮೊದಲ ಬಾರಿಗೆ ಸ್ಮಾರ್ಟ್ ಕಾರ್ಡ್ ಬಳಸುವ ಸೌಲಭ್ಯ ಆರಂಭವಾಗಲಿದೆ.

ಏಪ್ರಿಲ್ ತಿಂಗಳ ಅಂತ್ಯದೊಳಗೆ  ಎಲ್ಲಾ ಮಾರ್ಗಗಳ ಬಿಎಂಟಿಸಿ ಬಸ್ ಗಳಲ್ಲಿ ಕ್ಯಾಶ್ ಲೆಸ್ ವ್ಯವಹಾರ ಪ್ರಾರಂಭವಾಗಲಿದೆ,  ಈ ತಿಂಗಳಾಂತ್ಯದ ವೇಳೆಗೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ  ಸ್ಮಾರ್ಟ್ ಕಾರ್ಡ್ ಗಳನ್ನು ಮಾರಾಟ ಮಾಡುವ ಕೌಂಟರ್ ತೆರೆಯಲಾಗುತ್ತದೆ.

ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಕ್ಯಾಶ್ ಲೆಸ್ ಸೌಲಭ್ಯ ಒದಗಿಸುತ್ತಿರುವ ಕೀರ್ತಿ ರಾಜ್ಯಕ್ಕೆ ಸಲ್ಲುತ್ತದೆ. ಬಿಎಂಟಿಸಿ ಸಿಬ್ಬಂದಿಗೆ  ಪ್ರಾಯೋಗಿಕವಾಗಿ ಸ್ಮಾರ್ಟ್ ಕಾರ್ಡ್ ಸೌಲಭ್ಯ ಆರಂಭಿಸಿರುವುದಾಗಿ ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ 2016 ರಲ್ಲಿ ಬಿಎಂಟಿಸಿ ಮತ್ತು ಆ್ಯಕ್ಸಿಸ್ ಬ್ಯಾಂಕ್ ಸೇರಿ ಆ್ಯಕ್ಸಿಸ್ ಬ್ಯಾಂಕ್  ಬಿಎಂಟಿಸಿ ಸ್ಮಾರ್ಟ್ ಕಾರ್ಡ್ ಜಾರಿಗೆ ತರಲಾಗಿದ್ದು, ಕಾರ್ಡ್ ಬಳಸಿ ಮೆಷಿನ್ ಗಳಿಂದ ಟಿಕೆಟ್ ಪಡೆಯಬಹುದಾಗಿತ್ತು. ಇದರಿಂದ ಬಸ್ ಗಳಲ್ಲಿ ಸ್ಮಾರ್ಟ್ ಕಾರ್ಡ್ ಆರಂಭಿಸುವ ಯೋಜನೆ ಹೊಳೆಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಸ್ಮಾರ್ಟ್ ಕಾರ್ಡ್ ಬಳಕೆಯಿಂದ ಕಂಡಕ್ಟರ್ ಗಳಿಗೆ ಅನುಕೂಲವಾಗಲಿದೆ. ಬಿಎಂಟಿಸಿಯಲ್ಲಿ ಪಡೆದುಕೊಳ್ಳುವ ಕಾರ್ಡ್ ಗಳನ್ನು ಸದ್ಯದ ಪರಿಸ್ಥಿತಿಯಲ್ಲಿ ಮೆಟ್ರೋಗೆ ಬಳಸಲು ಸಾಧ್ಯವಾಗುವುದಿಲ್ಲ, ಬಿಎಂ ಆರ್ ಸಿಎಲ್ ಜೊತೆ ಮಾತುಕತೆ ನಡೆಸಿ, ಬಿಎಂಟಿಸಿ ಮತ್ತು ಬಿಎಂಆರ್ ಸಿಎಲ್ ಗೆ ಒಂದೇ ಕಾರ್ಡ್ ಬಳಸಬಹುದಾಗಿದೆ.ಬಿಎಂಟಿಸಿಯ ಸ್ಮಾರ್ಟ್ ಕಾರ್ಡ್ ಗಳಿಂದ ಪ್ರಯಾಣಿಕರು ಎಲ್ಲಾ ಮಾಲ್ ಗಳು ಹಾಗೂ ಶಾಪ್ ಗಳಲ್ಲೂ ಖರೀದಿ ಮಾಡಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT