ಸಿಎಂ ಸಿದ್ದರಾಮಯ್ಯ 
ರಾಜ್ಯ

ರಾಜ್ಯದಲ್ಲಿ ಆರು ಹೊಸ ಉದ್ದಿಮೆ ಸ್ಥಾಪನೆಗೆ 9ಸಾವಿರ ಕೋಟಿ ಬಂಡವಾಳ ಹೂಡಿಕೆ

ರಾಜ್ಯದಲ್ಲಿ ಆರು ಹೊಸ ಉದ್ದಿಮೆ ಸ್ಥಾಪಿಸಲು 9 ಸಾವಿರ ಕೋಟಿ ರು ಬಂಡವಾಳ ಹೂಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿ ...

ಬೆಂಗಳೂರು: ರಾಜ್ಯದಲ್ಲಿ  ಆರು ಹೊಸ ಉದ್ದಿಮೆ ಸ್ಥಾಪಿಸಲು 9 ಸಾವಿರ ಕೋಟಿ ರು  ಬಂಡವಾಳ ಹೂಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿ ಒಪ್ಪಿಗೆ ನೀಡಿದೆ. ಈ ಆರು ಹೊಸ ಉದ್ದಿಮೆಗಳಿಂದ 35, 487 ಮಂದಿಗೆ ಉದ್ಯೋಗವಕಾಶ ದೊರೆಯಲಿದೆ.

ಮೆ. ಒರಾಕಲ್‌ ಇಂಡಿಯಾ ಪ್ರೈ.ಲಿ. ಬೆಂಗಳೂರು ನಗರ ಜಿಲ್ಲೆಯ ಕಾಡುಬೀಸನಹಳ್ಳಿಯಲ್ಲಿ 2438 ಕೋಟಿ ರೂ. ಹೂಡಿಕೆ ಮಾಡಲಿದ್ದು, 9697 ಮಂದಿಗೆ ಉದ್ಯೋಗ ಕಲ್ಪಿಸಲಿದೆ. ಇದಕ್ಕಾಗಿ 13.29 ಎಕರೆ ಭೂಮಿ ಮಂಜೂರು ಮಾಡಲಾಗಿದೆ.

ಮೆ.ಬ್ಲೂಸ್ಟೋನ್‌ ಟೆಕ್‌ಪಾರ್ಕ್‌ ಎಲ್‌ಎಲ್‌ಸಿ ಕಂಪನಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಪ್ಪಾಜಿಪುರ, ಸಮೇತನಹಳ್ಳಿ ಮತ್ತು ಕೊರಲೂರು ಗ್ರಾಮದಲ್ಲಿ ಇಂಟಿಗ್ರೇಟ್‌ ಐಟಿ ಪಾರ್ಕ್‌ ಸ್ಥಾಪನೆಗೆ 55 ಎಕರೆ ಭೂಮಿ ಮಂಜೂರು ಮಾಡಲಾಗಿದೆ. ಕಂಪನಿಯು ಅಲ್ಲಿ 2051.39 ಕೋಟಿ ರೂ. ಹೂಡಿಕೆ ಮಾಡಲು ಒಪ್ಪಿಗೆ ನೀಡಲಾಗಿದೆ.

ಮೆ.ಎಲ್‌ ಅಂಡ್‌ ಟಿ ಕನ್‌ಸ್ಟ್ರಕ್ಷನ್‌ ಎಕ್ಯೂಪ್‌ಮೆಂಟ್‌ ಲಿಮಿಟೆಡ್‌ 1280 ಕೋಟಿ ರೂ. ಮತ್ತು 800 ಕೋಟಿ ರೂ. ವೆಚ್ಚದಲ್ಲಿ 18000 ಉದ್ಯೋಗಾವಕಾಶ ಕಲ್ಪಿಸುವ ಎರಡು ಐಟಿ, ಐಟಿಇಎಸ್‌ ಎಸ್‌ಇಝೆಡ್‌ ಸ್ಥಾಪನೆಗೆ ಮುಂದಾಗಿದ್ದು, ಅದಕ್ಕಾಗಿ ಬೆಂಗಳೂರು ನಗರದ ಬ್ಯಾಟರಾಯನಪುರದಲ್ಲಿ 12.22 ಎಕರೆ ಹಾಗೂ 5.8 ಎಕರೆ ಭೂಮಿ ಮಂಜೂರು ಮಾಡಲಾಗಿದೆ.

ಮುದ್ದೇನಹಳ್ಳಿಯಲ್ಲಿ ಪ್ರವಾಸೋದ್ಯಮ ಮತ್ತು ಕ್ರೀಡಾಹಬ್‌: ಭಾರತರತ್ನ ಸರ್‌ ಎಂ.ವಿಶ್ವೇಶ್ವರಯ್ಯ ಅವರ ಹುಟ್ಟೂರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಮುದ್ದೇನಹಳ್ಳಿಯಲ್ಲಿ ಮೆ.ಕಾರ್ನರ್‌ ಸ್ಟೋನ್‌ ಪ್ರಾಪರ್ಟಿ ಡೆವಲಪರ್ಸ್‌ ಸಂಸ್ಥೆ 1330 ಕೋಟಿ ರೂ. ವೆಚ್ಚದಲ್ಲಿ 5540 ಮಂದಿಗೆ ಉದ್ಯೋಗ ಕಲ್ಪಿಸುವ ಸಮಗ್ರ ಮನರಂಜನಾ ಪಾರ್ಕ್‌, ಪ್ರವಾಸೋದ್ಯಮ ಮತ್ತು ಕ್ರೀಡಾ ಹಬ್‌ ಸ್ಥಾಪನೆಗೆ ಒಪ್ಪಿಗೆ ನೀಡಲಾಗಿದ್ದು, ಅದಕ್ಕಾಗಿ 300 ಎಕರೆ ಜಮೀನು ಮಂಜೂರು ಮಾಡಲಾಗಿದೆ.

ಅದೇರೀತಿ ಮೆ.ದೇವಿ ಸಿಟಿ ಇಂಡಸ್ಟ್ರಿಯಲ್‌ ಪಾರ್ಕ್‌ ಸಂಸ್ಥೆಯು 1149 ಕೋಟಿ ರೂ. ವೆಚ್ಚದಲ್ಲಿ ಒಂದು ಸಾವಿರ ಮಂದಿಗೆ ಉದ್ಯೋಗಾವಕಾಶ ಕಲ್ಪಿಸುವ ಹೈಟೆಕ್‌ ಇಂಡಸ್ಟ್ರಿಯಲ್‌ ಪಾರ್ಕ್‌ ನಿರ್ಮಾಣಕ್ಕೆ ಒಪ್ಪಿಗೆ ನೀಡಿರುವ ಉನ್ನತ ಮಟ್ಟದ ಸಮಿತಿ, ಅದಕ್ಕಾಗಿ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕು ಯಮಕನಮರಡಿ ಹೋಬಳಿಯ ವಂಟ್‌ಮುರಿ ಗ್ರಾಮದಲ್ಲಿ 1054 ಎಕರೆ ಭೂಮಿ ಒದಗಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT