ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯಾದ್ಯಂತ ಧೂಮಪಾನಿಗಳಿಂದ 1.7 ಕೋಟಿ ರು. ದಂಡ ವಸೂಲಿ: ಕೆಎಸ್ಆರ್ ಟಿಸಿ

ಕರ್ನಾಟಕ ರಸ್ತೆ ಸಾರಿಗೆ ನಿಗಮದ ಧೂಮಪಾನ ವಿರೋಧಿ ನಡೆ ಅನಿರೀಕ್ಷಿತ ಪ್ರಮಾಣದ ಹಣ ವಸೂಲು ಮಾಡಿದೆ....

ಬೆಂಗಳೂರು: ಕರ್ನಾಟಕ ರಸ್ತೆ ಸಾರಿಗೆ ನಿಗಮದ ಧೂಮಪಾನ ವಿರೋಧಿ ನಡೆ ಅನಿರೀಕ್ಷಿತ ಪ್ರಮಾಣದ ಹಣ ವಸೂಲು ಮಾಡಿದೆ.

2013 ರಿಂದ ರಾಜ್ಯದ ವಿವಿದ ಕೆಎಸ್ ಆರ್ ಟಿ ಬಸ್ ನಿಲ್ದಾಣಗಳಲ್ಲಿ ಸುಮಾರು 85,143 ಪ್ರಯಾಣಿಕರಿಂದ 1.7 ಕೋಟಿ ರೂ ಹಣ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಸ್ ನಿಲ್ದಾಣಗಳಲ್ಲಿ ಧೂಮಪಾನ ಮಾಡುವವರ ಸಂಖ್ಯೆ 2013-14 ರಲ್ಲಿ  16, 438 ಇತ್ತು, 2014-15 ರ ವೇಳೆಗೆ 32, 018 ಇದ್ದದ್ದು 2015-16 ರ ವೇಳೆಗೆ 23,166 ರಷ್ಟು ಹೆಚ್ಚಾಗಿದೆ.

ಯಾವುದೇ ಬಸ್ ನಿಲ್ದಾಣಗಳಲ್ಲಿ ನಿಂತು ಧೂಮಪಾನ ಮಾಡಿದರೇ, 2003 ರ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಪೂರೈಕೆ ಮತ್ತು ವಿತರಣೆ ನಿಯಂತ್ರಣ ಕಾಯ್ದೆ ಪ್ರಕಾರ ಅಂಥವರಿಗೆ 200 ರು ದಂಡ ವಿಧಿಸಲಾಗುತ್ತದೆ.

ರಾಜ್ಯದ ಸುಮಾರು 150 ಬಸ್ ನಿಲ್ದಾಣಗಳಲ್ಲಿ ಧೂಮಪಾನ ಮಾಡುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದೇವೆ, ಕೇವಲ ಆದಾಯ ಹೆಚ್ಚಿಸುವುದು ನಮ್ಮ ಉದ್ದೇಶವಲ್ಲ, ಧೂಮಪಾನದಿಂದ ಸಾರ್ವಜನಿಕರಿಗೆ ಆರೋಗ್ಯದ ಮೇಲಾಗುವ ಪರಿಣಾಮಗಳನ್ನು ತಿಳಿಸಲು ನಾವು ದಂಡ ಹಾಕುತ್ತಿದ್ದೇವೆ  ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಬಸ್ ನಿಲ್ದಾಣಗಳಲ್ಲಿ ದಂಡ ಹಾಕುತ್ತಿರುವ ಹಿನ್ನೆಲೆಯಲ್ಲಿ ಧೂಮಪಾನ ಮಾಡುವವರ ಸಂಖ್ಯೆ ಕಡಿಮೆಯಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ದಂಡದ ಪ್ರಮಾಣವನ್ನು ಕೇಂದ್ರ ಸರ್ಕಾರ ಏರಿಸಿದೆ. ಇದುವರೆಗೂ 200 ರು ಇದ್ದ ದಂಡದ ಮೊತ್ತವನ್ನು 1,000 ರು.ಗೆ ಏರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT