ರಾಜ್ಯ

ಗುಂಡ್ಲುಪೇಟೆ: ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿದ್ದ ವ್ಯಕ್ತಿ ಸಾವು

Shilpa D

ಗುಂಡ್ಲುಪೇಟೆ: ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿದ್ದ ವ್ಯಕ್ತಿಗೆ ಸಂಬಂಧಿಕರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದ್ದಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಸಿದ್ದನಾಯಕ ಮೃತ ವ್ಯಕ್ತಿ. ಸಿದ್ದನಾಯಕ್ ಸಂಬಂಧಿಯೊಬ್ಬರ ಶವ ನೋಡಲು ತೆರಳಿದ್ದಾಗ ಊರಿನ ಮುಖ್ಯಸ್ಥರು ಮಾಡಿದ  ಅವಮಾನದಿಂದ ಬೇಸತ್ತು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ  ಅವರು ಸಾವನ್ನಪ್ಪಿದ್ದಾರೆ.

ಈ ಸಂಬಂಧ ಆತ್ಮಹತ್ಯೆಗೆ ಪ್ರೇರಣೆ ನೀಡಿದರೆಂಬ ಕಾರಣಕ್ಕೆ ಮೃತನ ಪುತ್ರ ಮಹೇಶ್ ಎಂಬಾತ ಗ್ರಾಮದ 15 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

SCROLL FOR NEXT