ಟಿ.ಬಿ ಜಯಚಂದ್ರ 
ರಾಜ್ಯ

ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ವಿಚಾರಣಾ ವೆಚ್ಚವನ್ನು ತಮಿಳುನಾಡು ಭರಿಸಬೇಕು: ಟಿ.ಬಿ ಜಯಚಂದ್ರ

ಜಯಲಲಿತಾ, ಶಶಿಕಲಾ ನಟರಾಜನ್‌ ಆಕ್ರಮ ಆಸ್ತಿ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಕರ್ನಾಟಕ ಸರ್ಕಾರ ಮಾಡಿರುವ ವೆಚ್ಚವನ್ನು ...

ಬೆಂಗಳೂರು: ಜಯಲಲಿತಾ, ಶಶಿಕಲಾ ನಟರಾಜನ್‌  ಆಕ್ರಮ ಆಸ್ತಿ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಕರ್ನಾಟಕ ಸರ್ಕಾರ ಮಾಡಿರುವ ವೆಚ್ಚವನ್ನು ತಮಿಳುನಾಡು ಸರ್ಕಾರ ಭರಿಸಬೇಕು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ತಮಿಳುನಾಡು ಸರ್ಕಾರ 5 ಕೋಟಿ ರು ನೀಡಬೇಕು ಎಂದು ಹೇಳಿದೆ. ಅದರ ಹೊರತಾಗಿಯೂ ಸುದೀರ್ಘ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಹಣ ಖರ್ಚು ಮಾಡಿದೆ. ಹೀಗಾಗಿ ಈ ಎಲ್ಲಾ ಖರ್ಚು ವೆಚ್ಚಗಳನ್ನು ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಪತ್ಕ ಬರೆಯುವುದಾಗಿ ತಿಳಿಸಿದ್ದಾರೆ.

ಸುಪ್ರೀಂ ನಿರ್ದೇಶನದ ಮೇರೆಗೆ ಪ್ರಾಸಿಕ್ಯೂಟರ್‌ ನೇಮಿಸಿ  ಈ ಪ್ರಕರಣವನ್ನು ರಾಜ್ಯವೇ ನಿರ್ವಹಿಸಿತ್ತು. ಈ ಪ್ರಕರಣ ಹೈಕೋರ್ಟಿನಲ್ಲಿ ವಜಾ ಆದ ಬಳಿಕ ಮೇಲ್ಮನವಿ ಸಲ್ಲಿಸಲಾಯಿತು. ಇದಕ್ಕೆ ಆಗಿರುವ ವೆಚ್ಚವನ್ನು ತಮಿಳುನಾಡು ಭರಿಸಬೇಕು ಎಂದರು.

ಜಯಾ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗೆ ಕರ್ನಾಟಕ ಸರಕಾರ ವ್ಯಯ ಮಾಡಿದ ಸುಮಾರು 5 ಕೋಟಿ ರೂ.ಗಳನ್ನು ಪಾವತಿ ಮಾಡುವಂತೆ ಸುಪ್ರೀಂ ಕೋರ್ಟ್‌ ತಮಿಳುನಾಡು ಸರಕಾರಕ್ಕೆ ಮಂಗಳವಾರ ನಿರ್ದೇಶನ ನೀಡಿತ್ತು,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)