ಸಂಗ್ರಹ ಚಿತ್ರ 
ರಾಜ್ಯ

ಶೂಟೌಟ್ ಗೆ ಬಿಜೆಪಿ ಶಾಸಕರೇ ಕಾರಣ: ವಿಡಿಯೋದಲ್ಲಿ ಕಡಬಗೆರೆ ಶ್ರೀನಿವಾಸ್ ಹೇಳಿಕೆ

ಇಡೀ ನಗರವನ್ನು ಬೆಚ್ಚಿ ಬೀಳಿಸಿದ್ದ ಕೋಗಿಲು ಕ್ರಾಸ್ ಬಳಿಯ ಶೂಟೌಟ್ ಪ್ರಕರಣ ಸಂಬಂಧ ದಾಸನಪುರ ಎಪಿಎಂಸಿ ಯಾರ್ಡ್ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಹೇಳಿಕೆ ನೀಡಿದ್ದು, ತಮ್ಮ ಮೇಲಿನ ಶೂಟೌಟ್ ಗೆ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರೇ ಕಾರಣ ಎಂದು ಹೇಳಿದ್ದಾರೆ.

ಬೆಂಗಳೂರು: ಇಡೀ ನಗರವನ್ನು ಬೆಚ್ಚಿ ಬೀಳಿಸಿದ್ದ ಕೋಗಿಲು ಕ್ರಾಸ್ ಬಳಿಯ ಶೂಟೌಟ್ ಪ್ರಕರಣ ಸಂಬಂಧ ದಾಸನಪುರ ಎಪಿಎಂಸಿ ಯಾರ್ಡ್ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಹೇಳಿಕೆ ನೀಡಿದ್ದು, ತಮ್ಮ ಮೇಲಿನ ಶೂಟೌಟ್ ಗೆ  ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರೇ ಕಾರಣ ಎಂದು ಹೇಳಿದ್ದಾರೆ.

ಶೂಟೌಟ್ ನಡೆದ ಸುಮಾರು 2 ವಾರಗಳ ಬಳಿಕ ಆಸ್ಪತ್ರೆಯಿಂದಲೇ ವಿಡಿಯೋದಲ್ಲಿ ಮಾತನಾಡಿರುವ ಶ್ರೀನಿವಾಸ್ ತಮ್ಮ ಮೇಲಿನ ಶೂಟೌಟ್ ಗೆ ಶಾಸಕ ಎಸ್ ಎರ್ ವಿಶ್ವನಾಥ್ ಅವರೇ ಕಾರಣ ಎಂದು ಆರೋಪಿಸಿದ್ದಾರೆ.  ಶ್ರೀನಿವಾಸ್ ಅವರ ನಿರ್ದೇಶನದ ಮೇರೆಗೆ ರೌಡಿ ಶೀಟರ್ ಗಳಾದ ಬೂನ್ ಬಾಬು, ನಾಗಶೆಟ್ಟಿ ಹಳ್ಳಿ ಸತೀಶ್ ದಾಳಿ ಮಾಡಿದ್ದರು ಎಂದು ಆರೋಪಿಸಿದ್ದಾರೆ. ನಗರದ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ಶ್ರೀನಿವಾಸ್ ಚಿಕಿತ್ಸಾ ಕೊಠಡಿಯಿಂದಲೇ ವಿಡಿಯೋದಲ್ಲಿ ಮಾತನಾಡಿದ್ದು, ಫೆ.3ರಂದು ರೈತ ಸಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮನೆಗೆ ವಾಪಸ್ಸು ಆಗುತ್ತಿದ್ದ ವೇಳೆ ನಗರದ ಯಲಹಂಕ ಬಳಿಯ ಕೋಗಿಲು ಕ್ರಾಸ್ ಬಳಿ  ಬೈಕ್‌ನಲ್ಲಿ ಬಂದ ಇಬ್ಬರು ನನ್ನ ಮೇಲೆ ಬಂದೂಕಿನಿಂದ ಮೂರು ಗುಂಡುಗಳನ್ನು ಹಾರಿಸಿ ಪರಾರಿಯಾದರು. ಅಲ್ಲದೆ, ಈ ಶೂಟೌಟ್ ಕೃತ್ಯದ ಹಿಂದೆ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಸೇರಿ ಮೂವರ ಕೈವಾಡವಿದೆ ಎಂದು  ಆರೋಪಿಸಿದ್ದಾರೆ.

ಶೂಟೌಟ್ ಕೃತ್ಯದಲ್ಲಿ ಶಾಸಕ ವಿಶ್ವನಾಥ್, ಅವರ ಆಪ್ತ ಡಾನ್ ಸತೀಶ್ ಅಲಿಯಾಸ್ ನಾಗಶೆಟ್ಟಿಹಳ್ಳಿ ಸತೀಶ್ ಹಾಗೂ ಬೂನ್‌ಬಾಬು ಅಲಿಯಾಸ್ ರಾಜೇಂದ್ರ ಪ್ರಸಾದ್ ಭಾಗಿಯಾಗಿರುವ ಬಗ್ಗೆ ನನಗೆ ಶಂಕೆ ಇದೆ. ಅಲ್ಲದೆ, ನನಗೆ  ಗೊತ್ತಿಲ್ಲದಿದ್ದಂತೆ ಗುಂಡಿನ ದಾಳಿ ನಡೆಸಿದರು. ಈ ಸಂಬಂಧ ಒಟ್ಟು ಐದು ಜನರ ವಿರುದ್ಧ ವಕೀಲರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ ಎಂದು ಕಡಬಗೆರೆ ಶ್ರೀನಿವಾಸ್ ತಿಳಿಸಿದ್ದಾರೆ. "ಈ ಶೂಟೌಟ್ ಕೃತ್ಯದಲ್ಲಿ ಬಿಜೆಪಿ  ಶಾಸಕ ಎಸ್.ಆರ್.ವಿಶ್ವನಾಥ್ ಕೈವಾಡವಿದೆ. ಈ ಸಂಬಂಧ ಎಲ್ಲಿ ಬೇಕಾದರೂ ಬಂದು ನಾನು ದೂರು ನೀಡುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT