ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡು ಹೊರಬಂದ ದಟ್ಟ ಹೊಗೆ 
ರಾಜ್ಯ

ಬೆಳ್ಳಂದೂರು ಕೆರೆಯಲ್ಲಿ ಕಾಣಿಸಿಕೊಂಡ ಬೆಂಕಿ

ಬೆಳ್ಳಂದೂರು ಕೆರೆಯಲ್ಲಿ ನಿನ್ನೆ ಸಂಜೆ ಬೆಂಕಿ ಹತ್ತಿಕೊಂಡು ಸುತ್ತಮುತ್ತಲ ನಿವಾಸಿಗಳಲ್ಲಿ...

ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ  ನಿನ್ನೆ ಸಂಜೆ ಬೆಂಕಿ ಹತ್ತಿಕೊಂಡು ಸುತ್ತಮುತ್ತಲ ನಿವಾಸಿಗಳಲ್ಲಿ ಕೆಲ ಕಾಲ ಆತಂಕವನ್ನುಂಟುಮಾಡಿತ್ತು.
ಅತಿಯಾದ ಪ್ರಮಾಣದಲ್ಲಿ ಕೈಗಾರಿಕಾ ತ್ಯಾಜ್ಯ ಕೆರೆಗೆ ಸೇರುವುದು, ಮಿಥೇನ್ ನ ಪ್ರಮಾಣ ಹೆಚ್ಚಾಗಿ ಸೇರ್ಪಡೆಯಾಗಿರುವುದು, ಘನ ತ್ಯಾಜ್ಯ ವಸ್ತುಗಳ ಅಧಿಕ ಸೇರ್ಪಡೆಯಿಂದ ಸುತ್ತಲಿನ ವಾತಾವರಣದಲ್ಲಿ ಉಷ್ಣತೆ ಹೆಚ್ಚಾಗಿ ಬೆಂಕಿ ಹತ್ತಿಕೊಂಡು ಹೊಗೆಯುಗುಳಿತು. ಸುತ್ತಮುತ್ತಲಿನ ಆಸ್ತಿಪಾಸ್ತಿಗಳಿಗೆ ಯಾವುದೇ ನಷ್ಟವುಂಟಾಗಿಲ್ಲ.
ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆಯುಗುಳಲಾರಂಭಿಸಿದ್ದನ್ನು ಸುತ್ತಮುತ್ತಲ ನಿವಾಸಿಗಳು ನೋಡಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಅಗ್ನಿ ಶಾಮಕ ಯಂತ್ರ ಸ್ಥಳಕ್ಕೆ ತೆರಳಿತು. ಬೆಳ್ಳಂದೂರು ಕೆರೆಯಲ್ಲಿ  ಈ ಹಿಂದೆ ಕೂಡ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತ್ತು.
ಬೆಳ್ಳಂದೂರು ಕೆರೆಯ ಸ್ವಚ್ಛತೆ ಕಾಪಾಡುವ ಪ್ರಯತ್ನ ನಡೆಸಿದರೂ ಇದುವರೆಗೆ ಯಾವುದೇ ಪ್ರಗತಿ ಕಂಡುಬಂದಿಲ್ಲ. ಕೆರೆಯ ಸ್ವಚ್ಛತೆಗೆ ಒಂದೂವರೆ ವರ್ಷ ಹಿಂದೆ ಸಮಿತಿಯನ್ನು ರಚಿಸಲಾಗಿದ್ದು, ರಾಜಕೀಯ ವ್ಯಕ್ತಿಗಳ ಪ್ರವೇಶದಿಂದಾಗಿ ಏನೂ ಪ್ರಗತಿ ಹೊಂದಲು ಸಾಧ್ಯವಾಗಿಲ್ಲ ಎಂದು ನಾಗರಿಕ ಹಕ್ಕು ಹೋರಾಟಗಾರ್ತಿ ಕವಿತಾ ರೆಡ್ಡಿ ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT