ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಶ್ಲೀಲ ವೆಬ್ ಸೈಟ್ ಗೆ ಸಂಗಾತಿಯ ಲೈಂಗಿಕ ದೃಶ್ಯಾವಳಿ ಅಪ್ ಲೋಡ್ ಮಾಡಿದ ಟೆಕಿ

ಲಿವಿಂಗ್ ರಿಲೇಷನ್ ಶಿಪ್ ಸಂಗಾತಿಯ ಜೊತೆಗಿನ ಲೈಂಗಿಕ ಕ್ರಿಯೆಯ ವಿಡಿಯೋವನ್ನು ಅಶ್ಲೀಲ ವೆಬ್ ಸೈಟ್ಗ ಅಪ್ ಲೋಡ್ ಮಾಡಿದ್ದ ...

ಬೆಂಗಳೂರು/ ಚಿಕ್ಕಮಗಳೂರು: ಲಿವಿಂಗ್ ರಿಲೇಷನ್ ಶಿಪ್ ಸಂಗಾತಿಯ ಜೊತೆಗಿನ ಲೈಂಗಿಕ ಕ್ರಿಯೆಯ ವಿಡಿಯೋವನ್ನು ಅಶ್ಲೀಲ ವೆಬ್ ಸೈಟ್ಗ ಅಪ್ ಲೋಡ್ ಮಾಡಿದ್ದ ಬೆಂಗಳೂರು ಮೂಲದ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ,

ಮಾನ್ಯತಾ ಟೆಕ್ ಪಾರ್ಕ್ ನ ಖಾಸಗಿ ಕಂಪನಿಯ ಸಾಫ್ಟ್ ವೇರ್ ಉದ್ಯೋಗಿಯಾಗಿರುವ ಹೇಮಂತ್ ಬಂಧಿತ ಆರೋಪಿ. ಚಿಕ್ಕಮಗಳೂರು ವಿದ್ಯಾರ್ಥಿನಿ ನೀಡಿದ ದೂರಿನ ಅನ್ವಯ ಅತ್ಯಾಚಾರ ಆರೋಪದಲ್ಲಿ  ಆತನನ್ನು ಬಂಧಿಸಲಾಗಿದೆ.

ಖಾಸಗಿ ಕಾಲೇಜಿನಲ್ಲಿ ಎಂಜಿನೀಯರಿಂಗ್ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಹೇಮಂತ್ ಗೆ ಸ್ನೇಹವಾಗಿತ್ತು, ನಂತರ ಇಬ್ಬರು ಸಹಜೀವನ ನಡೆಸುತ್ತಿದ್ದರು. ಆಕೆಯನ್ನು ಮದುವೆಯಾಗುವುದಾಗಿ ಹೇಮಂತ್ ಹೇಳಿದ್ದ.

ಇಬ್ಬರ ನಡುವೆ ವೈಮನಸ್ಸು ಉಂಟಾಗಿ ಕೆಲ ದಿನಗಳಲ್ಲೇ ಇಬ್ಬರು ದೂರಾಗಿದ್ದರುಯ ಸಹ ಜೀವನದಲ್ಲಿದ್ದಾಗ ಇಬ್ಬರ ನಡುವೆ ನಡೆದಿದ್ದ ಲೈಂಗಿಕ ಕ್ರಿಯೆಯ ದೃಶ್ಯಗಳನ್ನು ಯುವಕ ಚಿತ್ರೀಕರಿಸಿಕೊಂಡಿದ್ದ. ಕೆಲವು ತಿಂಗಳಿಂದ ಚಿಕ್ಕಮಗಳೂರು ಕಾಲೇಜಿಗೆ ಶಿಫ್ಟ್ ಆಗುವಂತೆ ಇಲ್ಲದಿದ್ದರೇ ವಿಡಿಯೋಗಳನ್ನು ಅಪ್ ಲೋಡ್ ಮಾಡುವುದಾಗಿ ಹೇಮಂತ್ ಆಕೆಗೆ ಬ್ಲಯಾಕ್ ಮೇಲ್ ಮಾಡುತ್ತಿದ್ದ.

ವಿಡಿಯೋ ಎರಡು ವರ್ಷಗಳ ಹಿಂದಿನದ್ದಾಗಿದ್ದು , ಎರಡು ವಾರಗಳ ಹಿಂದೆ ಹೇಮಂತ್ ವಿಡಿಯೋವನ್ನು ಅಶ್ಲೀಲ ವೆಬ್ ಸೈಟ್ ಗೆ ಅಪ್ ಲೋಡ್ ಮಾಡಿದ್ದ. ಈ ಸಂಬಂಧ ಯುವತಿ ತರೀಕೆರೆ ಪೊಲೀಸರಿಗೆ ನೀಡಿದ ದೂರಿನ ಅನ್ವಯ ಬೆಂಗಳೂರಿಗೆ ಪೊಲೀಸರು ಹೇಮಂತ್ ನನ್ನು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ಅತ್ಯಾಚಾರ ಮತ್ತು 2000ರ ಮಾಹಿತಿ ತಂತ್ರಜ್ಞಾನ ಕಾಯ್ದೆ ಉಲ್ಲಂಘನೆ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಫೆ.10ರಂದು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇಬ್ಬರು ಮತ್ತೆ ಒಂದಾಗಲು ನಡೆಸಿದ್ದ ರಾಜೀ ಸಂಧಾನ ವಿಪಲವಾಗಿತ್ತು,  ಮತ್ತೆ ಒಂದಾಗಲು ಯುವತಿ ನಿರಾಕರಿಸಿದ ಕಾರಣ ನಾನು ವಿಡಿಯೋ ಅಪ್ ಲೋಡ್ ಮಾಡಿದ್ದಾಗಿ ಹೇಮಂತ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT