ಸಾಂದರ್ಭಿಕ ಚಿತ್ರ 
ರಾಜ್ಯ

ಬಂಡೀಪುರ ಅರಣ್ಯದಲ್ಲಿ ಬೆಂಕಿ: ಅರಣ್ಯಾಧಿಕಾರಿ ಸಾವು, ನಾಲ್ವರಿಗೆ ಗಾಯ

ಬಂಡೀಪುರ ರಾಷ್ಟ್ರೀಯ ಅರಣ್ಯದ ಕಲ್ಕೆರೆ ರೇಂಜ್ ನಲ್ಲಿ ಬೆಂಕಿ ಹತ್ತಿಕೊಂಡು ರೇಂಜ್ ಆಫೀಸರ್...

ಮೈಸೂರು: ಬಂಡೀಪುರ ರಾಷ್ಟ್ರೀಯ ಅರಣ್ಯದ ಕಲ್ಕೆರೆ ರೇಂಜ್ ನಲ್ಲಿ ಬೆಂಕಿ ಹತ್ತಿಕೊಂಡು ರೇಂಜ್ ಆಫೀಸರ್ ಮೃತಪಟ್ಟು ಇತರ ನಾಲ್ವರು ಗಾಯಗೊಂಡಿದ್ದಾರೆ.ಮೃತಪಟ್ಟ ಅರಣ್ಯಾಧಿಕಾರಿಯನ್ನು ಮುರುಗಪ್ಪ ತಮಣ್ಣ ಗೌಡ ಎಂದು ಗುರುತಿಸಲಾಗಿದೆ.
ಗಾಯಗೊಂಡಿರುವ ರೇಂಜ್ ಅರಣ್ಯಾಧಿಕಾರಿ ಗಂಗಾಧರ್ ಮತ್ತು ಇತರ ಮೂವರು ಅರಣ್ಯ ಗಾರ್ಡ್ ಗಳಿಗೆ ಚಿಕಿತ್ಸೆ ನೀಡಲಾಗಿದೆ. ಬೀದರ್ ಮೂಲದ ಮುರುಗಪ್ಪ ಅವರು ಬೆಂಕಿಯನ್ನು ಆರಿಸಲು ಹೋಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮಾಹಿತಿ ಸಿಕ್ಕ ಕೂಡಲೇ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು ಯತ್ನಿಸಿದರು. ಆದರೆ ಒಣಗಿದ ಲಾಂಟನಾ ಕಳೆ ಮತ್ತು ಹುಲ್ಲುಗಳಿಂದ ಬೆಂಕಿ ಇನ್ನಷ್ಟು ಹತ್ತಿಕೊಂಡಿತು. ಬೆಂಕಿಯ ಜ್ವಾಲೆ ಹತ್ತಿಕೊಳ್ಳುತ್ತಿದ್ದಂತೆ ವನ್ಯ ಮೃಗಗಳು ಬೇರೆಡೆಗೆ ಓಡಿಹೋದವು. 
ಬೆಂಕಿಯನ್ನು ಆರಿಸಲು ನೆರೆಯ ನಾಗರಹೊಳೆ ಅರಣ್ಯ, ಚಾಮರಾಜನಗರ ಮತ್ತು ಬಿಳಿಗಿರಿ ರಂಗ ಬೆಟ್ಟದಿಂದ  ಅಧಿಕಾರಿಗಳು ಭದ್ರತಾ ಸಿಬ್ಬಂದಿಯನ್ನು ಕರೆದರು.ಸುಮಾರು 400 ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಲು ಯತ್ನಿಸಿದರು.
ಅರಣ್ಯ ಸಿಬ್ಬಂದಿ ಬೆಂಕಿಯನ್ನು ಆರಿಸಲು ಸ್ಥಳೀಯ ಬುಡಕಟ್ಟು ಜನರ ನೆರವು ಪಡೆದರು. ಬೆಂಕಿ ಹತ್ತಿಕೊಳ್ಳಲು ಕಾರಣವನ್ನು ಅರಣ್ಯಾಧಿಕಾರಿಗಳು ಪತ್ತೆಹಚ್ಚುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ನಾಗರಹೊಳೆ, ಎಂ.ಎಂ.ಹಿಲ್ಸ್ ಮತ್ತು ಕಾವೇರಿ ವನ್ಯಮೃಗ ಅಭಯಾರಣ್ಯದಲ್ಲಿ ಪಡೆ ನಿಯೋಜಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT