ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ 3ನೇ ಮಹಡಿಯಿಂದ ಬಿದ್ದ ರೇಪ್ ಆರೋಪಿ

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಸಿಟಿ ಸಿವಿಲ್‌ ಕೋರ್ಟ್ ಕಟ್ಟಡದ 4ನೇ ಮಹಡಿಯಿಂದ ಬಿದ್ದು ಅತ್ಯಾಚಾರ ಆರೋಪಿ ಗಾಯಗೊಂಡಿರುವ ಘಟನೆ...

ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಸಿಟಿ ಸಿವಿಲ್‌ ಕೋರ್ಟ್ ಕಟ್ಟಡದ 4ನೇ ಮಹಡಿಯಿಂದ ಬಿದ್ದು ಅತ್ಯಾಚಾರ ಆರೋಪಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಬಾಗಲಗುಂಟೆ ಠಾಣೆ ವ್ಯಾಪ್ತಿಯ ಹದಿನೈದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ವಿಕ್ಕಿ ಅಲಿಯಾಸ್‌ ನರಸಿಂಹಮೂರ್ತಿ (21) ಎಂಬಾತನನ್ನು ಬಂಧಿಸಿದ್ದ ಪೊಲೀಸರು, 55ನೇ ಸಿಟಿ ಸಿವಿಲ್‌ ನ್ಯಾಯಾಲಯಕ್ಕೆ ಮಧ್ಯಾಹ್ನ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಆತನನ್ನು 12 ದಿನಗಳವರೆಗೆ ನ್ಯಾಯಾಂಗ  ಬಂಧನಕ್ಕೆ ಒಪ್ಪಿಸಿದರು.
ವಿಕ್ಕಿಯನ್ನು ಕರೆದುಕೊಂಡು ನ್ಯಾಯಾಲಯ ಕಟ್ಟಡದ ಸ್ಟೇರ್ ಕೇಸ್ ಬಳಿ ಕುಳಿತಿದ್ದ. ಈ ವೇಳೆ ತನಗೆ ತಲೆ ಸುತ್ತುತ್ತಿದೆ ಎಂದು ಆರೋಪಿ ಹೇಳಿದ್ದಾನೆ. ಸಹಾಯ ಪಡೆಯಲು ಪಕ್ಕದಲ್ಲಿದ್ದ ಪೊಲೀಸ್ ಆ ಕಡೆ ತಿರುಗಿದಾಗ ವಿಕ್ಕಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಈ ವೇಳೆ ಆಯತಪ್ಪಿ 3 ನೇ ಮಹಡಿಯಿಂದ ಬಿದ್ದಿದ್ದಾನೆ.  ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. 
ಬಾಗಲಗುಂಟೆ ಪೊಲೀಸರು ಆರೋಪಿಯನ್ನು  ನ್ಯಾಯಾಲಯದ ನಿರ್ದೇಶನದಂತೆ ಜೈಲಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಹೀಗಾಗಿ ಆತನ ವಿರುದ್ಧ ಪೊಲೀಸರ ವಶದಿಂದ ತಪ್ಪಿಸಿಕೊಳ್ಳಲು ಯತ್ನ (ಐಪಿಸಿ 224)’ ಆರೋಪದಡಿ ಹಲಸೂರು ಗೇಟ್‌ ಠಾಣೆಯಲ್ಲಿ  ಪ್ರಕರಣ ದಾಖಲಿಸಿದ್ದಾರೆ. 
ಪೋಕ್ಸೊ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ವಿಕ್ಕಿಯು ಮೊದಲ ಆರೋಪಿ. ಬಾಲಕಿಯನ್ನು ಅಪಹರಿಸಿ ಆಂಧ್ರಪ್ರದೇಶದ ಮಡಕಶಿರ ತಾಲ್ಲೂಕಿನ ಮನೆಯೊಂದರಲ್ಲಿ ಕೂಡಿಟ್ಟು ಅತ್ಯಾಚಾರ ಎಸಗಿದ್ದ’ ಎಂದು ಬಾಗಲಗುಂಟೆ ಪೊಲೀಸರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT