ಬಂಡೀಪುರ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ 
ರಾಜ್ಯ

ಬಂಡೀಪುರ: 750 ಎಕರೆ ವ್ಯಾಪಿಸಿದ ಕಾಡ್ಗಿಚ್ಚು; ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸ

ಬಂಡೀಪುರ ರಾಷ್ಟ್ರೀಯ ಅರಣ್ಯದಲ್ಲಿ ಶನಿವಾರ ಕಾಡ್ಗಿಚ್ಚು ಹತ್ತಿಕೊಂಡು ಉರಿದು ಸುಮಾರು 750 ಎಕರೆ ಪ್ರದೇಶ...

ಮೈಸೂರು:ಬಂಡೀಪುರ ರಾಷ್ಟ್ರೀಯ ಅರಣ್ಯದಲ್ಲಿ ಶನಿವಾರ ಕಾಡ್ಗಿಚ್ಚು ಹತ್ತಿಕೊಂಡು ಉರಿದು ಸುಮಾರು 750 ಎಕರೆ ಪ್ರದೇಶ ಬೂದಿಯಾಗಿದೆ. ಸತತ 24 ಗಂಟೆಗಳ ಕಾರ್ಯಾಚರಣೆಯಿಂದ ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.
ಸುಮಾರು 600 ಮಂದಿ ಮತ್ತು 6 ಟ್ಯಾಂಕರ್ ನೀರು ಸುರಿದು ಬೆಂಕಿಯನ್ನು ಆರಿಸಲಾಯಿತು. ಹುಲಿ ಅಭಯಾರಣ್ಯದ ಕಲ್ಕರೆ ರೇಂಜ್ ಅರಣ್ಯದಲ್ಲಿ ಬೆಂಕಿಯ ಜ್ವಾಲೆ ವ್ಯಾಪಿಸಿ ಅದನ್ನು ಆರಿಸಲು ಹೋದ 28 ವರ್ಷದ ಅರಣ್ಯ ಭದ್ರತಾ ಸಿಬ್ಬಂದಿ ಮುರಿಗೆಪ್ಪ ತಮ್ಮಂಗೊಲ್ ಮೃತಪಟ್ಟಿದ್ದರು. ರೇಂಜ್ ಅರಣ್ಯ ಅಧಿಕಾರಿ ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದವು. 
ಬೆಂಕಿಯನ್ನು ಆರಿಸಲು ಸುತ್ತಮುತ್ತಲ ಚಾಮರಾಜನಗರ, ಬಿಳಿಗಿರಿರಂಗ ಬೆಟ್ಟ ಹುಲಿ ಅಭಯಾರಣ್ಯದ ಸಿಬ್ಬಂದಿಯನ್ನು ಕೂಡ ಕರೆಸಿಕೊಂಡಿದ್ದರು. ಸೋಲಿಗ ಬುಡಕಟ್ಟು ಜನಾಂಗದವರು ಕೂಡ ಬಂದಿದ್ದರು. ಎಲ್ಲರೂ ಸೇರಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು.
ಅರಣ್ಯ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಬಿ.ಜಿ.ಹೊಸ್ಮಟ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಬೆಳಗಿನ ಜಾವ 3.30ರವರೆಗೆ ಕಾರ್ಯಾಚರಣೆ ನಡೆಸಿ ಬೆಳಗ್ಗೆ 8.30ಕ್ಕೆ ಬೆಂಕಿ ನಂದಿಸಲು ಸಾಧ್ಯವಾಯಿತು.ಮುನ್ನೆಚ್ಚರಿಕೆ ಕ್ರಮವಾಗಿ ತುರ್ತು ಫೈರ್ ಲೈನ್ ತರಿಸಲಾಯಿತು ಎಂದು ವಿವರಿಸಿದರು.
ಬೆಂಕಿ ಹತ್ತಿಕೊಂಡದ್ದರ ಹಿಂದೆ ಕೆಬ್ಬೆಪುರ ಹಾಡಿಯ ದುಷ್ಕರ್ಮಿಗಳ ಕೈವಾಡವಿರಬಹುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ಶಂಕಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT