ಬಂಡೀಪುರ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ 
ರಾಜ್ಯ

ಬಂಡೀಪುರ: 750 ಎಕರೆ ವ್ಯಾಪಿಸಿದ ಕಾಡ್ಗಿಚ್ಚು; ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸ

ಬಂಡೀಪುರ ರಾಷ್ಟ್ರೀಯ ಅರಣ್ಯದಲ್ಲಿ ಶನಿವಾರ ಕಾಡ್ಗಿಚ್ಚು ಹತ್ತಿಕೊಂಡು ಉರಿದು ಸುಮಾರು 750 ಎಕರೆ ಪ್ರದೇಶ...

ಮೈಸೂರು:ಬಂಡೀಪುರ ರಾಷ್ಟ್ರೀಯ ಅರಣ್ಯದಲ್ಲಿ ಶನಿವಾರ ಕಾಡ್ಗಿಚ್ಚು ಹತ್ತಿಕೊಂಡು ಉರಿದು ಸುಮಾರು 750 ಎಕರೆ ಪ್ರದೇಶ ಬೂದಿಯಾಗಿದೆ. ಸತತ 24 ಗಂಟೆಗಳ ಕಾರ್ಯಾಚರಣೆಯಿಂದ ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.
ಸುಮಾರು 600 ಮಂದಿ ಮತ್ತು 6 ಟ್ಯಾಂಕರ್ ನೀರು ಸುರಿದು ಬೆಂಕಿಯನ್ನು ಆರಿಸಲಾಯಿತು. ಹುಲಿ ಅಭಯಾರಣ್ಯದ ಕಲ್ಕರೆ ರೇಂಜ್ ಅರಣ್ಯದಲ್ಲಿ ಬೆಂಕಿಯ ಜ್ವಾಲೆ ವ್ಯಾಪಿಸಿ ಅದನ್ನು ಆರಿಸಲು ಹೋದ 28 ವರ್ಷದ ಅರಣ್ಯ ಭದ್ರತಾ ಸಿಬ್ಬಂದಿ ಮುರಿಗೆಪ್ಪ ತಮ್ಮಂಗೊಲ್ ಮೃತಪಟ್ಟಿದ್ದರು. ರೇಂಜ್ ಅರಣ್ಯ ಅಧಿಕಾರಿ ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದವು. 
ಬೆಂಕಿಯನ್ನು ಆರಿಸಲು ಸುತ್ತಮುತ್ತಲ ಚಾಮರಾಜನಗರ, ಬಿಳಿಗಿರಿರಂಗ ಬೆಟ್ಟ ಹುಲಿ ಅಭಯಾರಣ್ಯದ ಸಿಬ್ಬಂದಿಯನ್ನು ಕೂಡ ಕರೆಸಿಕೊಂಡಿದ್ದರು. ಸೋಲಿಗ ಬುಡಕಟ್ಟು ಜನಾಂಗದವರು ಕೂಡ ಬಂದಿದ್ದರು. ಎಲ್ಲರೂ ಸೇರಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು.
ಅರಣ್ಯ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಬಿ.ಜಿ.ಹೊಸ್ಮಟ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಬೆಳಗಿನ ಜಾವ 3.30ರವರೆಗೆ ಕಾರ್ಯಾಚರಣೆ ನಡೆಸಿ ಬೆಳಗ್ಗೆ 8.30ಕ್ಕೆ ಬೆಂಕಿ ನಂದಿಸಲು ಸಾಧ್ಯವಾಯಿತು.ಮುನ್ನೆಚ್ಚರಿಕೆ ಕ್ರಮವಾಗಿ ತುರ್ತು ಫೈರ್ ಲೈನ್ ತರಿಸಲಾಯಿತು ಎಂದು ವಿವರಿಸಿದರು.
ಬೆಂಕಿ ಹತ್ತಿಕೊಂಡದ್ದರ ಹಿಂದೆ ಕೆಬ್ಬೆಪುರ ಹಾಡಿಯ ದುಷ್ಕರ್ಮಿಗಳ ಕೈವಾಡವಿರಬಹುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ಶಂಕಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT