ಬಂಡೀಪುರ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ 
ರಾಜ್ಯ

ಬಂಡೀಪುರ: 750 ಎಕರೆ ವ್ಯಾಪಿಸಿದ ಕಾಡ್ಗಿಚ್ಚು; ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸ

ಬಂಡೀಪುರ ರಾಷ್ಟ್ರೀಯ ಅರಣ್ಯದಲ್ಲಿ ಶನಿವಾರ ಕಾಡ್ಗಿಚ್ಚು ಹತ್ತಿಕೊಂಡು ಉರಿದು ಸುಮಾರು 750 ಎಕರೆ ಪ್ರದೇಶ...

ಮೈಸೂರು:ಬಂಡೀಪುರ ರಾಷ್ಟ್ರೀಯ ಅರಣ್ಯದಲ್ಲಿ ಶನಿವಾರ ಕಾಡ್ಗಿಚ್ಚು ಹತ್ತಿಕೊಂಡು ಉರಿದು ಸುಮಾರು 750 ಎಕರೆ ಪ್ರದೇಶ ಬೂದಿಯಾಗಿದೆ. ಸತತ 24 ಗಂಟೆಗಳ ಕಾರ್ಯಾಚರಣೆಯಿಂದ ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.
ಸುಮಾರು 600 ಮಂದಿ ಮತ್ತು 6 ಟ್ಯಾಂಕರ್ ನೀರು ಸುರಿದು ಬೆಂಕಿಯನ್ನು ಆರಿಸಲಾಯಿತು. ಹುಲಿ ಅಭಯಾರಣ್ಯದ ಕಲ್ಕರೆ ರೇಂಜ್ ಅರಣ್ಯದಲ್ಲಿ ಬೆಂಕಿಯ ಜ್ವಾಲೆ ವ್ಯಾಪಿಸಿ ಅದನ್ನು ಆರಿಸಲು ಹೋದ 28 ವರ್ಷದ ಅರಣ್ಯ ಭದ್ರತಾ ಸಿಬ್ಬಂದಿ ಮುರಿಗೆಪ್ಪ ತಮ್ಮಂಗೊಲ್ ಮೃತಪಟ್ಟಿದ್ದರು. ರೇಂಜ್ ಅರಣ್ಯ ಅಧಿಕಾರಿ ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದವು. 
ಬೆಂಕಿಯನ್ನು ಆರಿಸಲು ಸುತ್ತಮುತ್ತಲ ಚಾಮರಾಜನಗರ, ಬಿಳಿಗಿರಿರಂಗ ಬೆಟ್ಟ ಹುಲಿ ಅಭಯಾರಣ್ಯದ ಸಿಬ್ಬಂದಿಯನ್ನು ಕೂಡ ಕರೆಸಿಕೊಂಡಿದ್ದರು. ಸೋಲಿಗ ಬುಡಕಟ್ಟು ಜನಾಂಗದವರು ಕೂಡ ಬಂದಿದ್ದರು. ಎಲ್ಲರೂ ಸೇರಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು.
ಅರಣ್ಯ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಬಿ.ಜಿ.ಹೊಸ್ಮಟ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಬೆಳಗಿನ ಜಾವ 3.30ರವರೆಗೆ ಕಾರ್ಯಾಚರಣೆ ನಡೆಸಿ ಬೆಳಗ್ಗೆ 8.30ಕ್ಕೆ ಬೆಂಕಿ ನಂದಿಸಲು ಸಾಧ್ಯವಾಯಿತು.ಮುನ್ನೆಚ್ಚರಿಕೆ ಕ್ರಮವಾಗಿ ತುರ್ತು ಫೈರ್ ಲೈನ್ ತರಿಸಲಾಯಿತು ಎಂದು ವಿವರಿಸಿದರು.
ಬೆಂಕಿ ಹತ್ತಿಕೊಂಡದ್ದರ ಹಿಂದೆ ಕೆಬ್ಬೆಪುರ ಹಾಡಿಯ ದುಷ್ಕರ್ಮಿಗಳ ಕೈವಾಡವಿರಬಹುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ಶಂಕಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ