ಬೆಂಗಳೂರ: ಬೆಂಗಳೂರಿನ ಮಾರತ್ ಹಳ್ಳಿಯಲ್ಲಿರುವ ನರ್ಸರಿ ಶಾಲೆಯೊಂದರಲ್ಲಿ ಮೂರುವರೆ ವರ್ಷದ ಬಾಲಕಿ ಮೇಲೆ 32 ವರ್ಷದ ಶಾಲೆಯ ಸೂಪರ್ ವೈಸರ್ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಶುಕ್ರವಾರ ಈ ಘಟನೆ ನಡೆದಿದ್ದು, ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ಮಂಜುನಾಥ್ ನನ್ನು ಪೊಲೀಸರು ಅಂದೇ ಬಂಧಿಸಿದ್ದಾರೆ. ಅಲ್ಲದೆ ಇಂದು ಶಾಲೆಯ ಪ್ರಾಂಶುಪಾಲೆ ಡಾ.ವೀಣಾ ಅವರನ್ನು ಸಹ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಶಾಲೆಯಿಂದ ವಾಪಸ್ ಬಂದ ನಂತರ ಬಾಲಕಿ ತನ್ನ ಖಾಸಗಿ ಭಾಗದಲ್ಲಿ ನೋವು ಕಾಣಿಸಿಕೊಂಡಿದ್ದು, ಪೋಷಕರು ಕೂಡಲೇ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ವೇಳೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಪತ್ತೆಯಾಗಿದೆ. ಕೂಡಲೇ ಬಾಲಕಿ ಪೋಷಕರು ಪೋಸ್ಕೋ ಕಾಯ್ದೆಯಡಿ ಕೇಸ್ ದಾಖಲಿಸಿದ್ದಾರೆ.
ಪೋಷಕರು ಇಂದು ಪುನಾ ಶಾಲೆಯ ಪ್ರಾಂಶುಪಾಲೆ ವಿರುದ್ಧ ದೂರು ನೀಡಿದ್ದು, ಘಟನೆಗೆ ಪ್ರಾಂಶುಪಾಲೆ ವೀಣಾ ಅವರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೆ ಈ ಕೂಡಲೇ ಆ ಶಾಲೆಯನ್ನು ಲಾಕ್ ಮಾಡುವಂತೆ ಹಲವು ಪೋಷಕರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos