ಸಾಂದರ್ಭಿಕ ಚಿತ್ರ 
ರಾಜ್ಯ

ಯಾದಗಿರಿ ಬಳಿ ಭೀಕರ ಅಪಘಾತ, 8 ಮಂದಿ ಸಾವು, 20 ಮಂದಿಗೆ ಗಾಯ

ಸಿಮೆಂಟ್ ಟ್ಯಾಂಕರ್ ವೊಂದು ಟೆಂಪೊಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಯಾದಗಿರಿ...

ಯಾದಗಿರಿ: ಸಿಮೆಂಟ್ ಟ್ಯಾಂಕರ್ ವೊಂದು ಟೆಂಪೊಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಯಾದಗಿರಿ ಸಮೀಪದ ರಾಮಸಮುದ್ರ ಬಳಿ ಸೋಮವಾರ ಸಂಜೆ ನಡೆದಿದೆ.
ಇಂದು ಸಂಜೆ ಹೈದರಾಬಾದ್ ನಿಂದ ಕಲಬುರ್ಗಿ ಜಿಲ್ಲೆಯ ವಾಡಿಗೆ ತೆರಳುತ್ತಿದ್ದ ಸಿಮೆಂಟ್ ತುಂಬಿದ ಟ್ಯಾಂಕರ್ ವೊಂದು ಶಹಾಪುರದಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು ಡಣಾಪುರಕ್ಕೆ ವಾಪಸ್ ಆಗುತ್ತಿದ್ದ ಟೆಂಪೊಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 
ಗಾಯಾಳುಗಳನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಈ ಸಂಬಂಧಿ ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಸ್ವತಂತ್ರ ಭಾರತದ ಅತಿದೊಡ್ಡ ಸುಧಾರಣೆ"- GST ಸುಧಾರಣೆ ಶ್ಲಾಘಿಸಿದ ಪ್ರಧಾನಿ ಮೋದಿ

ಜಿಎಸ್‌ಟಿ ಕಡಿತ ಲಾಭ ಗ್ರಾಹಕರಿಗೆ ವರ್ಗಾಯಿಸುವುದಾಗಿ ಮುಖೇಶ್ ಅಂಬಾನಿ ಭರವಸೆ

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ADR report: ದೇಶದಲ್ಲಿ ಶೇ. 47 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪ, ಬಿಲಿಯನೇರ್ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ, ಡಿಕೆಶಿ ಎಷ್ಟನೇ ಶ್ರೀಮಂತ?

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

SCROLL FOR NEXT