ವಿಕ್ಟೋರಿಯಾ ಆಸ್ಪತ್ರೆ ಮುಂಭಾಗ ದಲ್ಲಿದ್ದ ಮಮತಾ ಸಂಬಂಧಿಕರು 
ರಾಜ್ಯ

ಮಾನವೀಯತೆ ಮರೆತ ಜನ: ಪ್ರಯಾಣಿಕರು ರೋಧಿಸುತ್ತಿದ್ದರೆ ನೋಡುಗರು ಫೋಟೋ ತೆಗೆಯುತ್ತಿದ್ದರು

ಎಸ್ ಆರ್ ಟಿಸಿ ಬಸ್ ಗೆ ಬೆಂಕಿ ಬಿದ್ದು ಅದರಲ್ಲಿದ್ದ ಪ್ರಯಾಣಿಕರು ಹೊರಬರಲು ಪರದಾಡುತ್ತಿದ್ದರು. ಈ ವೇಳೆ ವಾಹನಗಳನ್ನು ನಿಲ್ಲಿಸಿದ್ದ ಕೆಲ ಜನ ...

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಗೆ ಬೆಂಕಿ ಬಿದ್ದು ಅದರಲ್ಲಿದ್ದ ಪ್ರಯಾಣಿಕರು ಹೊರಬರಲು ಪರದಾಡುತ್ತಿದ್ದರು. ಈ ವೇಳೆ ವಾಹನಗಳನ್ನು ನಿಲ್ಲಿಸಿದ್ದ ಕೆಲ ಜನ ಬೆಂಕಿಯಿಂದ ಹೊರಬರಲು ಸಹಾಯ ಮಾಡುವ ಬದಲು ತಮ್ಮ ಮೊಬೈಲ್ ಗಳಲ್ಲಿ ಫೋಟೋ ತೆಗೆಯುವಲ್ಲಿ ನಿರತರಾಗಿದ್ದರು.

ಚಂದ್ರಮ್ಮ ಎಂಬುವರು ಹೇಗೊ ತಪ್ಪಿಸಿಕೊಂಡು ಹೊರಬಂದಿದ್ದರು. ಆದರೆ ಅವರ ಚಿಕ್ಕಮ್ಮ , ಭಾಗ್ಯಮ್ಮ ಬೆಂಕಿಗೆ ಸಿಲುಕಿ ಪಟ್ಟಿದ್ದರು. ಈ ವೇಳೆ ಚಂದ್ರಮ್ಮ ತಮ್ಮ ಸಂಬಂಧಿ ಮಂಜುನಾಥ ಸ್ವಾಮಿಗೆ ಕರೆ ಮಾಡಿ ವಿಳಾಸ ತಿಳಿಸಿದ್ದರು. ತಕ್ಷಣಕ್ಕೆ ಸ್ಥಳಕ್ಕೆ ಮಂಜುನಾಥ ಸ್ವಾಮಿ ಬಂದಿದ್ದರು, ಅಲ್ಲಿ ನೆರೆದಿದ್ದ ಗುಂಪಿನ ಬಳಿ ಬಂದಾಗ ಅವರಿಗೆ ಆಘಾತವಾಗಿತ್ತು.

ಗುಂಪಿನಲ್ಲಿ ಸೇರಿದ್ದ ಮಂದಿ ಅಳುತ್ತಿದ್ದ ಪ್ರಯಾಣಿಕರಿಗೆ ಸಹಾಯ ಮಾಡುವ ಬದಲು ಮೊಬೈಲ್ ಫೋನ್ ಗಳಲ್ಲಿ ಫೋಟೊ ತೆಗೆಯುತ್ತಿದ್ದರು. ಯಾರೊಬ್ಬರು ಸಹಾಯ ಮಾಡಲು ಬರಲಿಲ್ಲ, ಇಲ್ಲವೇ ಪೊಲೀಸರಿಗೆ  ವಿಷಯ ಕೂಡ ತಿಳಿಸಲಿಲ್ಲ. ಅದು ಭಯಾನಕವಾಗಿತ್ತು ಎಂದು ಮಂಜುನಾಥಸ್ವಾಮಿ ವಿವರಿಸಿದ್ದಾರೆ.

ಮಗುವನ್ನು ಕಿಟಕಿಯ ಮೂಲಕ ಹೊರ ಕಳುಹಿಸಲಾಗಿತ್ತು, ತುರ್ತು ನಿರ್ಗಮನದ ಮೂಲಕ ಮಹಿಳೆಯೊಬ್ಬರು ಹೊರಬರಲು ಯತ್ನಿಸುತ್ತಿದ್ದರು. ಪ್ರಯಾಣಿಕರು ಭಯದಿಂದ ಕೂಗಾಡುತ್ತಿದ್ದರು, ಆದರೆ ಅಲ್ಲಿ ನೆರೆದಿದ್ದ ಜನ ಮಾನವೀಯಕತೆ ಮರೆತು ವಿಡಿಯೋ ರೆಕಾರ್ಡ್ ಮಾಡುವುದರಲ್ಲಿ ಬ್ಯುಸಿಯಾಗಿದ್ದರು ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಪ್ರಕರಣದಲ್ಲಿ ಗಾಯಗೊಂಡಿದ್ದ ಮಮತಾ ಎಂಬ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು, ತನ್ನಿಂದ ದೂರಾಗಿದ್ದ ಪತಿ ಸುರೇಶ್ ನನ್ನು ನೋಡಬೇಕು ಎಂದು ಮನವಿ ಮಾಡಿದರು. ಟಿವಿ ಚಾನೆಲ್ ಗಳಲ್ಲಿ ಸುದ್ದಿ ನೋಡಿದ ಮಮತಾ ಪತಿ ಸುರೇಶ್ ಮಮತಾ ದಾಖಲಾಗಿದ್ದ ಆಸ್ಪತ್ರೆಗೆ ಬಂದು ಪತ್ನಿಯನ್ನು ಭೇಟಿ ಮಾಡಿದ್ದಾರೆ. ಆಕೆಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT