ಶಶಿಕಲಾ 
ರಾಜ್ಯ

ಶಶಿಕಲಾ ಪಕ್ಕದ ಸೆಲ್ ನಲ್ಲಿದ್ದ ಸೈನೈಡ್ ಮಲ್ಲಿಕಾ ಹಿಂಡಲಗಾ ಜೈಲಿಗೆ ಶಿಫ್ಟ್

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರ ಕೊಠಡಿಯ ಪಕ್ಕದ ಸೆಲ್‌ನಲ್ಲಿದ್ದ ಸರಣಿ ಕೊಲೆಗಳ ಹಂತಕಿ ...

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರ ಕೊಠಡಿಯ ಪಕ್ಕದ ಸೆಲ್‌ನಲ್ಲಿದ್ದ ಸರಣಿ ಕೊಲೆಗಳ ಹಂತಕಿ ಸೈನೈಡ್ ಮಲ್ಲಿಕಾಳನ್ನು ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಮಲ್ಲಿಕಾ ಮೊದಲು ಹಿಂಡಲಗಾ ಜೈಲಿನಲ್ಲೇ ಇದ್ದಳು. ಅನಾರೋಗ್ಯದ ಕಾರಣಕ್ಕೆ ಚಿಕಿತ್ಸೆ ಕೊಡಿಸುವ ಸಲುವಾಗಿ ಮೂರು ತಿಂಗಳ ಹಿಂದೆ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕರೆತರಲಾಗಿತ್ತು.

ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿರುವ ಕಾರಣ ಆಕೆಯನ್ನು ಮತ್ತೆ ಸ್ಥಳಾಂತರ ಮಾಡಲಾಗಿದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಶಶಿಕಲಾ ಅವರಿಗೆ ಭದ್ರತೆ ಒದಗಿಸುವ ಕಾರಣಕ್ಕೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ಮಾತುಗಳೂ ಕೇಳಿ ಬಂದಿವೆ.

ಶಶಿಕಲಾ ಮತ್ತು ಮಲ್ಲಿಕಾ ಜೈಲಿನಲ್ಲಿ ಒಳ್ಳೆಯ ಗೆಳೆಯರಾಗಿದ್ದರು. ಶಶಿಕಲಾರನ್ನ ಕ್ಯೂನಲ್ಲಿ ನಿಲ್ಲಲು ಬಿಡದೇ ತಾನೇ ಊಟ ತಂದು ಕೊಡುತ್ತಿದ್ದರೆಂದು, ಆ ಕಾರಣಕ್ಕಾಗಿ ಮಲ್ಲಿಕಾಳನ್ನು ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಸಿಎಂ ಜಯಲಲಿತಾ ಅವರ ಅಪ್ಪಟ ಅಭಿಮಾನಿಯಾಗಿದ್ದ ಮಲ್ಲಿಕಾ 2014 ರಲ್ಲಿ ಜಯಲಲಿತಾರನ್ನು ಭೇಟಿ ಮಾಡಲು ಯತ್ನಿಸಿ ನಿರಾಶರಾಗಿದ್ದರು.

ಆರು ಮಹಿಳೆಯರನ್ನು ಕೊಂದ ಕಾರಣಕ್ಕೆ ಜೈಲಿಗೆ ಹೋದ ಹಂತಕಿಯರಲ್ಲಿ ಸೈನೈಡ್ ಮಲ್ಲಿಕಾ ಪ್ರಮುಖವಾದವಳು. ಬೆಂಗಳೂರಿನ ದೇವಸ್ಥಾನಗಳಿಗೆ ಬರುತ್ತಿದ್ದ ಶ್ರೀಮಂತ ಕುಟುಂಬದ ಮಹಿಳೆಯರ ಮೇಲೆ ಕಣ್ಣು ಹಾಕಿ ಅವರನ್ನು ಪರಿಚಯ ಮಾಡಿಕೊಳ್ಳುತ್ತಿದ್ದಳು. ಪರಿಚಯ ಆಪ್ತವಾಗುತ್ತಿದ್ದಂತೆ ಸೈನೈಡ್ ನೀಡಿ ಕೊಲೆ ಮಾಡುತ್ತಿದ್ದಳು ನಂತರ ಮಹಿಳೆಯರ ಚಿನ್ನಾಭರಣ ದೋಚಿ  ಪರಾರಿಯಾಗುತ್ತಿದ್ದಳು. 2008ರಲ್ಲಿ ಈಕೆಯನ್ನು ಬಂಧಿಸಲಾಗಿತ್ತು.

ಹಿಂಡಲಗಾ ಜೈಲು ದೇಶದಲ್ಲಿಯೇ ಅತಿ ಹಳೇಯ ಕಾರಾಗೃಹವಾಗಿದೆ, ಮರಣದಂಡನೆಗೆ ಗುರಿಯಾಗಿರುವ ಹಲವು ಅಪರಾಧಿಗಳು ಹಿಂಡಲಗಾ ಜೈಲಿನಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT