ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಪ್ರೇಮಲತಾ ದಿವಾಕರ್ 
ರಾಜ್ಯ

ರಾಘವೇಶ್ವರ ಶ್ರೀಗೆ ಬ್ಲ್ಯಾಕ್ ಮೇಲ್ ಕೇಸ್: ಪ್ರೇಮಲತಾ ದಂಪತಿಗೆ ಸಿಐಡಿ ಕ್ಲೀನ್ ಚಿಟ್

ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ಬ್ಲಾಕ್ ಮೇಲ್ ಪ್ರಕರಣದಲ್ಲಿ ಪ್ರೇಮಲತಾ ದಿವಾಕರ್ ದಂಪತಿಗೆ ಸಿಐಡಿ ಕ್ಲೀನ್ ಚಿಟ್ ...

ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ಬ್ಲಾಕ್ ಮೇಲ್ ಪ್ರಕರಣದಲ್ಲಿ ಪ್ರೇಮಲತಾ ದಿವಾಕರ್ ದಂಪತಿಗೆ ಸಿಐಡಿ ಕ್ಲೀನ್ ಚಿಟ್ ನೀಡಿದೆ.

ಬ್ಲ್ಯಾಕ್ ಮೇಲ್ ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಐಡಿ ಯಾವುದೇ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿರುವ ಜಿಎಂಎಫ್‍ಸಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.

ರಾಘವೇಶ್ವರ ಶ್ರೀಗಳಿಗೆ ರಾಮಚಂದ್ರಾಪುರ ಮಠದಲ್ಲಿ ರಾಮಕಥಾ ಗಾಯಕಿಯಾಗಿದ್ದ ಪ್ರೇಮಲತಾ ಹಾಗೂ ಪತಿ ದಿವಾಕರ್ ಅವರು ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ಆರೋಪಿಸಿ 2014ರ ಆ.26ರಂದು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ರಾಮಕಥಾ ಗಾಯಕಿ ಪ್ರೇಮಲತಾ, ಶ್ರೀಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವ, ಒಂದು ದಿನದ ಮುಂಚೆಯೇ ಈ ಪ್ರಕರಣ ದಾಖಲಾಗಿದೆ. ಈ ಪ್ರಕರಣ ದುರುದ್ದೇಶದಿಂದ ದಾಖಲಿಸಿದಂತೆ ಕಾಣುತ್ತದೆ. ಹೀಗಾಗಿ ಪ್ರಕರಣದಲ್ಲಿ ಯಾವುದೇ ಸತ್ಯಾಂಶ ಕಂಡುಬಂದಿಲ್ಲ ಎಂದು ಬಿ ರಿಪೋರ್ಟ್ ನಲ್ಲಿ ಸಿಐಡಿ ಉಲ್ಲೇಖಿಸಿದೆ.

ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ ಶಾಸ್ತ್ರಿ  ದಂಪತಿ ಮೂರು ಕೋಟಿ ರೂ. ಬೇಡಿಕೆ ಇಟ್ಟಿದ್ದರು. ಒಂದು ವೇಳೆ ಈ ಹಣವನ್ನು ನೀಡದೇ ಇದ್ದರೆ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ರಾಘವೇಶ್ವರ ಶ್ರೀ ಹೊನ್ನಾವರ ಪೊಲೀಸ್ ಠಾಣೆಯಲ್ಲಿ 2014ರ ಆಗಸ್ಟ್ ನಲ್ಲಿ ಬ್ಲಾಕ್‍ಮೇಲ್ ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT