ಬಳ್ಳಾರಿಯ ಕೊಟ್ಟೂರು ಪಟ್ಟಣದಲ್ಲಿ ಉರುಳಿಬಿದ್ದ ರಥವನ್ನು ಕ್ರೇನ್ ಮೂಲಕ ನಿನ್ನೆ ಎತ್ತಲಾಯಿತು. 
ರಾಜ್ಯ

ಕೊಟ್ಟೂರು ಜಾತ್ರೆ ಅನಾಹುತ: ಪಿಡಬ್ಲ್ಯುಡಿ, ದತ್ತಿ ಇಲಾಖೆ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಕೇಸು

ಕೊತ್ತೂರಿನಲ್ಲಿ ಗುರು ಕೊಟ್ಟೂರೇಶ್ವರ ಜಾತ್ರೆ ಸಂದರ್ಭದಲ್ಲಿ ರಥ ಉರುಳಿಬಿದ್ದು 11 ಜನರಿಗೆ ಗಾಯವಾದ...

ಬಳ್ಳಾರಿ: ಕೊತ್ತೂರಿನಲ್ಲಿ ಗುರು ಕೊಟ್ಟೂರೇಶ್ವರ ಜಾತ್ರೆ ಸಂದರ್ಭದಲ್ಲಿ ರಥ ಉರುಳಿಬಿದ್ದು 11 ಜನರಿಗೆ ಗಾಯವಾದ ಘಟನೆಗೆ ಸಂಬಂಧಪಟ್ಟಂತೆ ಲೋಕೋಪಯೋ ಗಿ ಇಲಾಖೆ ಸಹಾಯಕ ಕಾರ್ಯಕಾರಿ ಎಂಜಿನಿಯರ್ ತಿಮ್ಮಪ್ಪ,ದತ್ತಿ ಇಲಾಖೆ ಸಹಾಯಕ ಆಯುಕ್ತ ಮಹೇಶ್, ದೇವಸ್ತಾನ ಸಮಿತಿಯ ಕಾರ್ಯಕಾರಿ ಅಧಿಕಾರಿ ಹಾಲಪ್ಪ ಅವರ ವಿರುದ್ಧ ನಿರ್ಲಕ್ಷ್ಯದ ಕೇಸು ದಾಖಲಾಗಿದೆ. 
65 ಅಡಿ ಎತ್ತರದ ಮರದ ದೇವಸ್ಥಾನದ ರಥವನ್ನು ವಾರ್ಷಿಕ ಜಾತ್ರೆ ಪ್ರಯುಕ್ತ ಹೊರತೆಗೆಯಲಾಗಿತ್ತು. ಚೆಲ್ಲ ಆಂಜನಪ್ಪ ಎಂಬುವವರು ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಥದ ಮುಂಬಾಗದ ಬಲಚಕ್ರ ಉರುಳಿ ಬಿದ್ದು ಅಲ್ಲಿ ಸೇರಿದ್ದ ಭಕ್ತರು ಗಾಯಗೊಂಡಿದ್ದಾರೆ.
ಸಹಾಯಕ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು ಘಟನೆಯ ತನಿಖೆ ನಡೆಸಲಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT