ಸಾಂದರ್ಭಿಕ ಚಿತ್ರ 
ರಾಜ್ಯ

ಶಾಸಕ ಪಿಳ್ಳಮುನಿಶಾಮಪ್ಪ ಅಂಗರಕ್ಷಕನ ಸರ್ವೀಸ್ ರಿವಾಲ್ವರ್ ನಾಪತ್ತೆ

ತಮ್ಮ ಸರ್ವೀಸ್ ರಿವಾಲ್ವರ್ ನಾಪತ್ತೆಯಾಗಿದೆ ಎಂದು ದೇವನಹಳ್ಳಿ ಶಾಸಕ ಪಿಳ್ಳ ಮುನಿಶಾಮಪ್ಪ ಅವರ ಅಂಗರಕ್ಷಕ ನರಸಿಂಹ ಮೂರ್ತಿ ಯಲಹಂಕ ಠಾಣೆಯಲ್ಲಿ ದೂರು ...

ಬೆಂಗಳೂರು: ತಮ್ಮ ಸರ್ವೀಸ್ ರಿವಾಲ್ವರ್ ನಾಪತ್ತೆಯಾಗಿದೆ ಎಂದು ದೇವನಹಳ್ಳಿ ಶಾಸಕ ಪಿಳ್ಳ ಮುನಿಶಾಮಪ್ಪ ಅವರ ಅಂಗರಕ್ಷಕ ನರಸಿಂಹ ಮೂರ್ತಿ ಯಲಹಂಕ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನರಸಿಂಹ ಮೂರ್ತಿ ಅವರನ್ನು ಒಂದು ವರ್ಷದ ಹಿಂದೆ ಪಿಳ್ಳ ಮುನಿಶಾಮಪ್ಪ ಅವರ ಗನ್ ಮ್ಯಾನ್ ಆಗಿ ನೇಮಿಸಲಾಗಿತ್ತು. ಪಿಳ್ಳ ಮುನಿಶಾಮಪ್ಪ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜಿನಾಮೆ ಹಿಂಪಡೆಯುವಂತೆ ಅವರ ಮನವೊಲಿಸಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ .ಡಿ ದೇವೇಗೌಡ ಅವರು ಶಾಸಕರ ಮನೆಗೆ ಬಂದಿದ್ದರು. ಈ ವೇಳೆ ಮನೆಯ ಸಮೀಪ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು. ಅವರಲ್ಲೇ ಯಾರೋ ಪಿಸ್ತೂಲು ತೆಗೆದುಕೊಂಡಿರುವ ಸಾಧ್ಯತೆ ಇದೆ ಎಂದು ತಮ್ಮ ದೂರಿನಲ್ಲಿ ಹೇಳಿದ್ದಾರೆ.

ಆ ನಂತರ ಶಾಸಕರು ದೇವೇಗೌಡ ಅವರ ಮನೆಗೆ ತೆರಳಿದರು. ನಾನೂ ಕೂಡ ಅವರ ಜೊತೆಯಲ್ಲೇ ತೆರಳಿದ್ದೆ. ಅಲ್ಲಿ ಕಾರ್ಯಕರ್ತರು ಹಾಗೂ ಸ್ಥಳೀಯರು ಇದ್ದರು ಎಂದು ದೂರಿನಲ್ಲಿ ಹೇಳಿದ್ದಾರೆ.

ನಾಲ್ಕು ದಿನಗಳ ಹಿಂದೆಯೇ ಪಿಸ್ತೂಲ್ ಕಳುವಾಗಿದ್ದರೂ ಸುಮ್ಮನೇ ಇದ್ದ ನರಸಿಂಹ ಮೂರ್ತಿ ಬಹಳ ಹಿಂದೆಯೇ ಪಿಸ್ತೂಲ್ ಕಳೆದು ಕೊಂಡಿರಬಹುದು. 11 ವರ್ಷಗಳ ಹಿಂದೆ ಶಸ್ತ್ರಾಸ್ತ್ರ ಕದಿದ್ದ ಸಿಎಆರ್ ಪೇದೆ ಹಾಗೂ ಶಾಸಕ ಸಿ.ಆರ್ ಮನೋಹರ್ ಅವರ ಗನ್ ಮ್ಯಾನ್ ಆಗಿದ್ದ ಪುರುಷೋತ್ತಮ್ ಅವರನ್ನು ಬಂಧಿಸಿದ್ದ ಹಿನ್ನೆಲೆಯಲ್ಲಿ ನರಸಿಂಹ ಮೂರ್ತಿ ದೂರು ದಾಖಲಿಸಿರಬಹುದು ಎಂದು ತನಿಖಾಧಿಕಾರಿಗಳು ಅನುಮಾನ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT