ಬಿಜೆಪಿ ಸಂತಾಯಿಗೆ ಸೂಕ್ತ ಚಿಕಿತ್ಸೆ ನೀಡದ ಆರೋಪ: ವೈದ್ಯನ ಮೇಲೆ ಸಂಸದ ಅನಂತ್ ಕುಮಾರ್ ಹೆಗ್ಡೆ ಹಲ್ಲೆ 
ರಾಜ್ಯ

ತಾಯಿಗೆ ಸೂಕ್ತ ಚಿಕಿತ್ಸೆ ನೀಡದ ಆರೋಪ: ವೈದ್ಯನ ಮೇಲೆ ಸಂಸದ ಅನಂತ್ ಕುಮಾರ್ ಹೆಗ್ಡೆ ಹಲ್ಲೆ

ಅನಾರೋಗ್ಯದಿಂದ ನರಳುತ್ತಿದ್ದ ತಾಯಿಗೆ ಸೂಕ್ತ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿ ವೈದ್ಯರೊಬ್ಬರ ಮೇಲೆ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆಯವರು ಹಲ್ಲೆ ನಡೆಸಿರುವ ಘಟನೆ ಮಂಗಳವಾರ...

ಸಿರ್ಸಿ: ಅನಾರೋಗ್ಯದಿಂದ ನರಳುತ್ತಿದ್ದ ತಾಯಿಗೆ ಸೂಕ್ತ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿ ವೈದ್ಯರೊಬ್ಬರ ಮೇಲೆ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆಯವರು ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಅನಂತ್ ಕುಮಾರ್ ಹೆಗ್ಡೆಯವರ ತಾಯಿಯನ್ನು ಸಿರ್ಸಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು.

ಅನಂತ್ ಕುಮಾರ್ ಅವರು ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಸಿಸಿಟಿವಿ ದೃಶ್ಯಾವಳಿಗಳು ಇದೀಗ ಸಾಕಷ್ಟು ಸುದ್ದಿ ಮಾಡುತ್ತಿದೆ. ಸಿಸಿಟಿವಿ ದೃಶ್ಯಾವಳಿ ಕುರಿತಂತೆ ಖಾಸಗಿ ಮಾಧ್ಯಮವೊಂದು ವರದಿ ಮಾಡಿದ್ದು, ದೃಶ್ಯದಲ್ಲಿ ಹೆಗ್ಡೆಯವರು ವೈದ್ಯರಿಗೆ ಹಿಗ್ಗಾಮುಗ್ಗಾ ಥಳಿಸುತ್ತಿರುವುದು ಕಂಡು ಬಂದಿದೆ.

ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಖಾಸಗಿ ಆಸ್ಪತ್ರೆಯ ವೈದ್ಯರಾದ ಡಾ.ಮಧುಕೇಶ್ವರ ಜೀವಿ, ಡಾ. ಬಾಲಚಂದ್ರ ಮತ್ತು ಡಾ.ರಾಹುಲ್ ಮರ್ಶಾಕರ್ ಅವರ ಮೇಲೆ ಹೆಗ್ಡೆಯವರು ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.

ಘಟನೆ ಕುರಿತಂತೆ ಈ ವರೆಗೂ ಅಧಿಕೃತವಾಗಿ ಯಾವುದೇ ದೂರುಗಳು ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಪ್ರಜಾಪ್ರಭುತ್ವ ಉಳಿಸಿ': CJP Protest ಬೆಂಬಲಿಸಿ ಸಂವಿಧಾನದ ಪ್ರಸ್ತಾವನೆ ಓದಿದ ಸುಪ್ರೀಂ ಕೋರ್ಟ್ ವಕೀಲರು!

ಮುಂಗಾರು ಅಧಿವೇಶನ: ಪ್ರತಿಪಕ್ಷಗಳ NEET ಬಿಸಿಗೆ ಕೇಂದ್ರ ತಲ್ಲಣ; ಉಭಯ ಸದನ 4ನೇ ದಿನಕ್ಕೆ ಮುಂದೂಡಿಕೆ!

CJP Protest: ಹೊಸ ಮಾತುಕತೆಯ ಪ್ರಸ್ತಾಪ ಮುಂದಿಟ್ಟ ಕೇಂದ್ರ ಸರ್ಕಾರ, ಪ್ರತಿಭಟನಾಕಾರರು ಎಲ್ಲಿ ಹೇಳ್ತಾರೋ ಅಲ್ಲಿಯೇ ಚರ್ಚೆಗೆ ಸಿದ್ಧ- ಜೀತೇಂದ್ರ ಸಿಂಗ್!

CJP ಪ್ರತಿಭಟನೆಗೆ ಅಣ್ಣಾ ಹಜಾರೆ ಎಂಟ್ರಿ: ಕಣ್ಣೀರು ಮೂಲಕ ಮೌನ ಚಳುವಳಿ ಆರಂಭ, Video!

ಅತಿಯಾಗಿ ಕಾಫಿ ಕುಡಿತೀರಾ? ಹುಷಾರ್, ಮುಂದೆ ಈ ಸಮಸ್ಯೆ ಎದುರಾಗಬಹುದು! Neurosurgeon ಸಲಹೆ ಏನು?