ಸಚಿವ ಮಹದೇವ ಪ್ರಸಾದ್ ನಿಧನಕ್ಕೆ ಗಣ್ಯರ ಸಂತಾಪ! 
ರಾಜ್ಯ

ಸಚಿವ ಮಹದೇವ ಪ್ರಸಾದ್ ನಿಧನಕ್ಕೆ ಗಣ್ಯರ ಸಂತಾಪ!

ಸಹಕಾರಿ ಸಚಿವ ಮಹದೇವ ಪ್ರಸಾದ್ ಅವರ ಅಕಾಲಿಕ ಮರಣ ಸುದ್ದಿಗೆ ಸಂಬಂಧಿಸಿದಂತೆ ರಾಜಕೀಯ ವಲಯದ ವಿವಿಧ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಸಹಕಾರಿ ಸಚಿವ ಮಹದೇವ ಪ್ರಸಾದ್ ಅವರ ಅಕಾಲಿಕ ಮರಣ ಸುದ್ದಿಗೆ ಸಂಬಂಧಿಸಿದಂತೆ ರಾಜಕೀಯ ವಲಯದ ವಿವಿಧ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮಹದೇವ ಪ್ರಸಾದ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ಬಿಎಸ್ ಯಡಿಯೂರಪ್ಪ ಅವರು, "ಮಹದೇವ ಪ್ರಸಾದ್ ಅವರ ಸಾವಿನ ಸುದ್ಧಿ ಕೇಳಿ ಆಘಾತವಾಗಿದೆ.  ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೆ ನೀಡಲಿ" ಎಂದು ಹೇಳಿದ್ದಾರೆ.

ಅಂತೆಯೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ಸಹಕಾರಿ ಸಚಿವ ಮಹದೇವ ಪ್ರಸಾದ್ ಅವರ ನಿಧನದಿಂದ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಎಂದು  ಹೇಳಿದ್ದಾರೆ. ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಟ್ವೀಟ್ ಮಾಡಿದ್ದು,  ಮಹದೇವ ಪ್ರಸಾದ್ ಅವರ ಸಾವಿನ ಸುದ್ದಿ ಕೇಳಿ ನೋವಾಗಿದೆ. ಅವರಿಗಿನ್ನೂ ಕೇವಲ 58 ವರ್ಷ ವಯಸ್ಸು. ಇಷ್ಟು ಚಿಕ್ಕವಯಸ್ಸಿನಲ್ಲೇ ಅವರು ನಮ್ಮನ್ನು  ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT