ಸಂಗ್ರಹ ಚಿತ್ರ 
ರಾಜ್ಯ

ಮಹದೇವ ಪ್ರಸಾದ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಪೂರ್ಣ!

ಮಂಗಳವಾರ ನಿಧನರಾದ ಸಹಕಾರಿ ಮತ್ತು ಸಕ್ಕರೆ ಸಚಿವ ಮಹದೇವ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನು ಅವರ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಹಾಲಹಳ್ಳಿಯಲ್ಲಿ ನಡೆಸಲಾಗುತ್ತಿದ್ದು, ಈಗಾಗಲೇ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಪೂರ್ಣಗೊಳಿಸಲಾಗಿದೆ.

ಚಾಮರಾಜನಗರ: ಮಂಗಳವಾರ ನಿಧನರಾದ ಸಹಕಾರಿ ಮತ್ತು ಸಕ್ಕರೆ ಸಚಿವ ಮಹದೇವ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನು ಅವರ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಹಾಲಹಳ್ಳಿಯಲ್ಲಿ ನಡೆಸಲಾಗುತ್ತಿದ್ದು, ಈಗಾಗಲೇ  ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಪೂರ್ಣಗೊಳಿಸಲಾಗಿದೆ.

ಮಹದೇವ ಪ್ರಸಾದ್ ಅವರ ಹಿರಿಯರ ಸಮಾಧಿ ಇರುವ ಜಾಗದಲ್ಲೇ ಮಹದೇವ ಪ್ರಸಾದ್ ಅವರ ಅಂತಿಮ ಕ್ರಿಯಾ ವಿಧಿ ನೆರವೇರಿಸಲು ಕುಟುಂಬವರ್ಗ ಸಿದ್ಧತೆ ನಡೆಸಿಕೊಂಡಿದ್ದು, ಅಂತ್ಯ ಕ್ರಿಯೆ ರಾಜಕೀಯ ಗಣ್ಯರು ಸೇರಿದಂತೆ  ಹಲವರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಲಹಳ್ಳಿಯಲ್ಲಿರುವ ಮಹದೇವ ಪ್ರಸಾದ್ ಅವರ ಕುಟುಂಬದ ಫಾರ್ಮ್ ಹೌಸ್ ನಲ್ಲೇ ಮಹದೇವ ಪ್ರಸಾದ್ ಅವರ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಈಗಾಗಲೇ  ಅಂತಿಮ ವಿಧಿವಿಧಾನ ಕಾರ್ಯಗಳ ಸಿದ್ಧತಾ ಕಾರ್ಯಗಳು ಪೂರ್ಣಗೊಂಡಿದ್ದು, ವೀರಶೈವ ಸಂಪ್ರದಾಯದಂತೆ ಇಂದು ಮಧ್ಯಾಹ್ನ ಸುಮಾರು 3 ಗಂಟೆ ಹೊತ್ತಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಚಾಮರಾಜ ನಗರದಲ್ಲಿ ರಜೆ ವಿಸ್ತರಣೆ
ಇನ್ನು ಇಂದು ಮಹದೇವ ಪ್ರಸಾದ್ ಅವರ ಅಂತ್ಯಕ್ರಿಯೆ ಇರುವುದರಿಂದ ಚಾಮರಾಜನಗರದಲ್ಲಿ ರಜೆ ವಿಸ್ತರಣೆ ಮಾಡಲಾಗಿದೆ. ನಿನ್ನೆ ರಾಜ್ಯಾದ್ಯಂತ ಒಂದು ಸರ್ಕಾರಿ ರಜೆ ಘೋಷಣೆ ಮಾಡಲಾಗಿತ್ತಾತ್ತು. ಮಹದೇವ ಪ್ರಸಾದ್ ಅವರು  ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದು, ಅವರ ಗೌರವಾರ್ಥ ಇಂದೂ ಕೂಡ ಚಾಮರಾಜನಗರದಲ್ಲಿ ರಜೆ ಮುಂದುವರೆಸಲಾಗಿದೆ.

ಜಿಲ್ಲೆಯ ಗಗನಚುಂಬಿ ಜಬಲ್ ರಸ್ತೆಯಲ್ಲಿರುವ ಮಹದೇವ ಪ್ರಸಾದ್ ಅವರ ನಿವಾಸಕ್ಕೆ ಈಗಾಗಲೇ ಪಾರ್ಥೀವ ಶರೀರ ಆಗಮಸಿದ್ದು ಸಾರ್ವಜನಿಕ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಪಾರ್ಥೀವ ಶರೀರ ಆಗಮನದ ವಿಚಾರ  ತಿಳಿಯುತ್ತಿದ್ದಂತೆಯೇ ಸಾವಿರಾರು ಮಂದಿ ಅಭಿಮಾನಿಗಳು ಅವರ ಮನೆ ಮುಂದೆ ನೆರೆದಿದ್ದು, ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಚಿಕ್ಕಮಗಳೂರಿಗೆ ಆಗಮಿಸಿದ್ದ ಸಚಿವ ಹೆಚ್ ಎಸ್ ಮಹದೇವ ಪ್ರಸಾದ್ ಅವರು ಮಂಗಳವಾರ ಮುಂಜಾನೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!