ಜಿ. ಪರಮೇಶ್ವರ್ 
ರಾಜ್ಯ

ಆಕ್ಷೇಪಾರ್ಹ ಹೇಳಿಕೆ: ಗೃಹ ಸಚಿವ ಪರಮೇಶ್ವರ್, ಎಸ್ ಪಿ ಮುಖಂಡನಿಗೆ ಸಮನ್ಸ್

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಘಟನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ...

ನವದೆಹಲಿ/ ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಘಟನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮತ್ತು ಸಮಾಜವಾದಿ ಪಕ್ಷದ ಮುಖಂಡ ಅಬು ಅಜ್ಮಿ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸಮನ್ಸ್‌ ಜಾರಿಗೊಳಿಸಿದೆ.
 
ಪರಮೇಶ್ವರ್ ಮತ್ತು ಅಜ್ಮಿ ನೀಡಿದ ಹೇಳಿಕೆ ಆಧರಿಸಿ ಅವರಿಗೆ ಸಮನ್ಸ್ ಜಾರಿಗೊಳಿಸಿ, ಉತ್ತರ ನೀಡುವಂತೆ ಸೂಚಿಸಲಾಗಿದೆ ಎಂದು ಆಯೋಗದ ಅಧ್ಯಕ್ಷೆ ಲಲಿತಾ ಕುಮಾರಮಂಗಲಂ ತಿಳಿಸಿದರು. ದೇಶದಲ್ಲಿರುವ ಎಲ್ಲಾ ಪುರುಷರು ಇದೇ ರೀತಿಯಿಲ್ಲ, ಶೇ, 25 ರಷ್ಟು ಪುರುಷರು ದೇಶದ ಮಹಿಳೆಯರಿಗೆ ಗೌರವ ನೀಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಪಾಶ್ಚಿಮಾತ್ಯ ಸಂಸ್ಕೃತಿ ಅನುಸರಿಸುವುದರಿಂದ ಇಂಥ ಘಟನೆಗಳು ನಡೆಯುತ್ತವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ಖಂಡಿಸಿರುವ ಕುಮಾರ ಮಂಗಲಂ , ಕೂಡಲೇ ಪರಮೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮಹಿಳೆಯರ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದಾರೆ.

ಘಟನೆಯಲ್ಲಿ ಪಾಲ್ಗೋಂಡ ಆರೋಪಿಗಳ ವಿರುದ್ಧ ಯಾವ ರೀತಿಯ ಶಿಸ್ತು ಕ್ರಮ ಜರುಗಿಸಿದ್ದೀರಾ ಎಂಬುದರ ಬಗ್ಗೆ ಲಿಖಿತ ಮಾಹಿತಿ ನೀಡುವಂತೆ ಐಜಿ, ಡಿಜಿ, ನಗರ ಪೊಲೀಸ್ ಆಯುಕ್ತ ಮತ್ತು ಗೃಹ ಸಚಿವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT