ಎಚ್.ಡಿ ದೇವೇಗೌಡ 
ರಾಜ್ಯ

ನೋಟು ರದ್ಧತಿ ಸದುದ್ದೇಶದಿಂದ ಕೂಡಿದೆ: ನಂತರದ ಮೋದಿ ನಡೆ ನಿರಾಸೆ ತಂದಿದೆ: ದೇವೇಗೌಡ

ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ನೋಟು ನಿಷೇಧ ಕ್ರಮ ಸದುದ್ದೇಶದಿಂದ ಕೂಡಿದೆ, ಆದರೆ ಅದರಿಂದ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಲು...

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ನೋಟು ನಿಷೇಧ ಕ್ರಮ ಸದುದ್ದೇಶದಿಂದ ಕೂಡಿದೆ, ಆದರೆ ಅದರಿಂದ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಲು ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ ಇದು ದೇಶದ ಜನತೆಗೆ ತೀವ್ರ  ನಿರಾಸೆ ಉಂಟು ಮಾಡಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಸರ್ವೋಚ್ಚನಾಯಕ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನೋಟು ರದ್ದತಿಯ ನಂತರದ 50 ದಿನಗಳಲ್ಲಿ 60 ನಿರ್ಧಾರಗಳನ್ನು ಮಾಡಲಾಗಿದೆ. ಇದರಿಂದ ಬಡವರು, ರೈತರು, ಕೂಲಿ– ಕಾರ್ಮಿಕರು ಪರದಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರೈತರ 60 ದಿನಗಳ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಪ್ರಧಾನಿ ಪ್ರಕಟಿಸಿದ್ದಾರೆ. ದೇಶದಲ್ಲಿ ಭೀಕರ ಬರಗಾಲ ಇದೆ. ಕೆಲವು ರಾಜ್ಯಗಳಲ್ಲಿ ಪ್ರವಾಹದಿಂದಾಗಿ  ಅತಿವೃಷ್ಟಿಯೂ ಉಂಟಾಗಿದೆ. ಬಡ್ಡಿ ಮನ್ನಾದಿಂದ ರೈತರ ಸಂಕಷ್ಟ ಪರಿಹಾರ ಆಗುವುದಿಲ್ಲ. ಡಿಸೆಂಬರ್ 31 ರಂದು ದೇಶವನ್ನುದ್ದೇಶಿಸಿ ಪ್ರಧಾನಿ ಮಾತನಾಡಿದರು, ಆದರೆ ಅವರ ಮಾತುಗಳ ನನಗೆ ಅರ್ಥವಾಗಲಿಲ್ಲ, ದೇಶದ ಜನತೆಗೆ ಅವರು ಏನು ಸಂದೇಶ ನೀಡಿದರು ಎಂಬುದು ನನಗೆ ತಿಳಿಯಲಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT