ಸಾಂದರ್ಭಿಕ ಚಿತ್ರ 
ರಾಜ್ಯ

ಪದವಿ ಕಾಲೇಜು ಕ್ಯಾಂಪಸ್ ಗಳಿಗೆ ಹೊರಗಿನವರಿಗೆ ಮುಕ್ತ ಪ್ರವೇಶವಿಲ್ಲ: ಕಾಲೇಜು ಶಿಕ್ಷಣ ಇಲಾಖೆ ನಿಯಮ

ಇನ್ನು ಮುಂದೆ ರಾಜ್ಯದ ಡಿಗ್ರಿ ಕಾಲೇಜು ಕ್ಯಾಂಪಸ್ ಗಳ ಒಳಗೆ ಪ್ರವೇಶಿಸುವವರು ಪ್ರಾಂಶುಪಾಲರ...

ಬೆಂಗಳೂರು: ಇನ್ನು ಮುಂದೆ ರಾಜ್ಯದ ಡಿಗ್ರಿ ಕಾಲೇಜು ಕ್ಯಾಂಪಸ್ ಗಳ ಒಳಗೆ ಪ್ರವೇಶಿಸುವವರು ಪ್ರಾಂಶುಪಾಲರ ಸಮ್ಮತಿ ತೆಗೆದುಕೊಳ್ಳದೆ ಒಳಹೋದರೆ ಹತ್ತಿರದ ಪೊಲೀಸ್ ಸ್ಟೇಷನ್ ಗೆ ಹೋಗಬೇಕಾಗುತ್ತದೆ. 
ಡಿಗ್ರಿ ಕಾಲೇಜುಗಳಲ್ಲಿ ಅಧ್ಯಯನ ಮಾಡುವ ಹೆಣ್ಣು ಮಕ್ಕಳ  ರಕ್ಷಣೆಗೆ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ, ಕಾಲೇಜು ಕ್ಯಾಂಪಸ್ ಒಳಗೆ ಹೊರಗಿನವರು ಪ್ರವೇಶಿಸಬಾರದೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ಸಂಬಂಧ ಅಧಿಕೃತ ಪ್ರಕಟಣೆ ಸದ್ಯದಲ್ಲಿಯೇ ಕಾಲೇಜುಗಳನ್ನು ತಲುಪಲಿದೆ.
ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಡಾ.ಅಜಯ್ ನಾಗಭೂಷಣ ಮಾತನಾಡಿ, ಕ್ಯಾಂಪಸ್ ಗಳಲ್ಲಿ ಹುಡುಗಿಯರ ರಕ್ಷಣೆಗಾಗಿ ಈ ಕಾನೂನು ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.
ಖಾಸಗಿ ಕಾಲೇಜುಗಳು ಸೂಕ್ತ ಭದ್ರತೆಗಳನ್ನು ಒಳಗೊಂಡಿರುತ್ತವೆ.ಹೆಚ್ಚಿನ ಉನ್ನತ ಮಟ್ಟದ ಕಾಲೇಜುಗಳಲ್ಲಿ ಸಿಸಿಟಿವಿ ಕ್ಯಾಮರಾ ಮತ್ತು ಭದ್ರತಾ ಸಿಬ್ಬಂದಿಗಳಿರುತ್ತಾರೆ. ಆದರೆ ಖಾಸಗಿ ಕಾಲೇಜುಗಳಿಗೆ ಹೋಲಿಸಿದರೆ ಸರ್ಕಾರಿ ಕಾಲೇಜುಗಳಲ್ಲಿ ಸರಿಯಾದ ಭದ್ರತೆ ಸೂಕ್ತ ರಕ್ಷಣೆಗಳಿರುವುದಿಲ್ಲ. ಇದುವರೆಗೆ ಕಾಲೇಜು ಆಡಳಿತ ವರ್ಗ ಅಥವಾ ವಿದ್ಯಾರ್ಥಿಗಳ ಕಡೆಯಿಂದ ನಿರ್ದಿಷ್ಟ ದೂರುಗಳು ಬಂದಿಲ್ಲ. ಆದರೂ ಕೂಡ ಮುಂದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಕೆಲವು ಕಾಲೇಜುಗಳಲ್ಲಿ ಸರಿಯಾದ ಕಂಪೌಂಡ್ ಗಳೇ ಇರುವುದಿಲ್ಲ. ಈ ಬಗ್ಗೆ ಕೂಡಲೇ ಗಮನಹರಿಸಿ ಅಭಿವೃದ್ಧಿ ನಿಧಿಯಡಿ ಕಾಲೇಜು ಕ್ಯಾಂಪಸ್ ಗಳಿಗೆ ಭದ್ರತೆ ನೀಡಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.
ವಿದ್ಯಾರ್ಥಿಗಳು ಕಾಲೇಜು ಅವಧಿಯಲ್ಲಿ, ಕ್ಯಾಂಪಸ್ ಒಳಗೆ ಗುರುತು ಪತ್ರವನ್ನು ಕಡ್ಡಾಯವಾಗಿ ಧರಿಸಬೇಕೆಂದು ಇಲಾಖೆ ಕಾನೂನು ಹೊರಡಿಸಲಿದೆ.
 ಕರ್ನಾಟಕ ರಾಜ್ಯದಲ್ಲಿ 411 ಸರ್ಕಾರಿ ಡಿಗ್ರಿ ಕಾಲೇಜುಗಳಿದ್ದು 3.04 ಲಕ್ಷ ವಿದ್ಯಾರ್ಥಿಗಳಿದ್ದಾರೆ. ಅವರಲ್ಲಿ 1.737 ಲಕ್ಷ ಹುಡುಗಿಯರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT