ಟ್ವಿಟರ್ ಬಳಕೆದಾರರ ಪ್ರಶ್ನೆಗಳಿಗೆ ಉತ್ತರಿಸಿದ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ 
ರಾಜ್ಯ

ಸಿಸಿಟಿವಿ ದೃಶ್ಯಗಳಲ್ಲಿ ಸ್ಪಷ್ಟ ಸಾಕ್ಷ್ಯದ್ದೇ ಕೊರತೆ: ಬೆಂಗಳೂರು ಪೊಲೀಸ್

ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಂಜಿ ರಸ್ತೆಯಲ್ಲಿ ನಡೆದಿದ್ದ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟಯ ಬಗ್ಗೆ ಮತ್ತಷ್ಟು ನಿಖರ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಹೇಳಿದ್ದಾರೆ.

ಬೆಂಗಳೂರು:  ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಂಜಿ ರಸ್ತೆಯಲ್ಲಿ ನಡೆದಿದ್ದ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತವಾಗುತ್ತಿದ್ದು ಪೊಲೀಸರು ಘಟನೆಗಳ ಬಗ್ಗೆ ಮತ್ತಷ್ಟು ನಿಖರ ಸಾಕ್ಷ್ಯಾಧಾರಗಳು ಸಿಗಬೇಕೆಂದು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಜನರು ಬ್ಲರ್ ಆಗಿರುವ ಚಿತ್ರಗಳನ್ನು ಟ್ವಿಟರ್ ನಲ್ಲಿ ಅಪ್ ಡೇಟ್ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತ ಪ್ರವೀಣ್ ಸೂದ್, ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಚಿತ್ರಗಳ ಮೂಲ ಫುಟೇಜ್ ನಮ್ಮ ಬಳಿಯೂ ಇದೆ. ಆದರೆ ಅದನ್ನು ಯಥಾವತ್ ವೀಕ್ಷಿಸಿದರೆ ಅದರಲ್ಲಿ ಮಾಧ್ಯಮಗಳು ಹೇಳುವುದಕ್ಕಿಂತ ಭಿನ್ನವಾದ ಅಂಶಗಳಿವೆ. ಆದರೆ ಮಾಧ್ಯಮಗಳೇಕೆ ಬ್ಲರ್ ಮಾಡುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.
ಲೈಂಗಿಕ ಕಿರುಕುಳ ನೀಡುತ್ತಿರುವುದು ಸ್ಪಷ್ಟವಾಗಿರುವುದಕ್ಕೆ ನಿಖರವಾದ ಸಾಕ್ಷ್ಯಗಳ ಕೊರತೆ ಇದೆ. ಸ್ಪಷ್ಟ ಸಾಕ್ಷ್ಯ ಸಿಗುವವರೆಗೂ ನಾವು ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸಿಕೊಳ್ಳುವುದಿಲ್ಲ ಎಂದು ಪೊಲೀಸ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ವರ್ಷಾಚರಣೆ ವೇಳೆ ನಿಗಾ ವಹಿಸಲು ಅಳವಡಿಸಲಾಗಿದ್ದ 46 ಸಿಸಿಟಿವಿ ಕ್ಯಾಮರಾಗಳ ದೃಶ್ಯಗಳು ಹಾಗೂ ಕಮರ್ಷಿಯಲ್ ಸಂಸ್ಥೆಗಳು ಅಳವಡಿಸಿದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದೇವೆ ಆದರೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಸ್ಪಷ್ಟ ಸಾಕ್ಷ್ಯಾಧಾರಗಳಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕಲೆಹಾಕಲು ಹಲವು ತಂಡಗಳನ್ನು ರಚಿಸಲಾಗಿದ್ದು, ಪ್ರಕರಣದ ಬಗ್ಗೆ ಗಂಭೀರವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ ಹೇಳಿದ್ದಾರೆ. 
ಇನ್ನು ಪ್ರವೀಣ್ ಸೂದ್ ಟ್ವೀಟ್ ಮೂಲಕ ಸ್ಪಷ್ಟನೆಯೊಂದನ್ನು ನೀಡಿದ್ದು ಎಫ್ಐಆರ್ ದಾಖಲಿಸಿರುವುದು ಕಮ್ಮನಹಳ್ಳಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲೇ ಹೊರತು ಎಂಜಿ ರಸ್ತೆ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಅಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT